ಬಂಟ್ವಾಳ: ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯದ ಬಂಟರ ಸಂಘದ ಕರಿಯಂಗಳ, ಬಡಗಬೆಳ್ಳೂರು,ತೆಂಕಬೆಳ್ಳೂರು,ಕೂರಿಯಾಳ,ಅಮ್ಮುಂಜೆ ಇವರ ವತಿಯಿಂದ ಸೋಣ ಸಂಭ್ರಮ -2025 ಕಾರ್ಯಕ್ರಮವು ಸೆ.14 ರಂದು ಭಾನುವಾರ ಬೆಳ್ಳೂರು ಕಾವೇಶ್ವರ ದೆವಸ್ಥಾನದಲ್ಲಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ , ಆಟೋಟ ಸ್ಫರ್ಧೆ, ವಿದ್ಯಾರ್ಥಿವೇತನ , ಸಭಾಕಾರ್ಯಕ್ರಮ
ಪೊಳಲಿ ರಾಮಕೃಷ್ಣ ತಪೋವನ ಸ್ವಾಮಿ ವಿವೇಕಚೈತನ್ಯಾನಂದ ಸ್ವಾಮೀಜಿಯವರು ದೀಪಪ್ರಜ್ವಲನೆ ಮಾಡಿ ಅಶೀರ್ವದಿಸಲಿದ್ದಾರೆ.
ಅಧ್ಯಕ್ಷತೆಯನ್ನು ಬೆಳ್ಳೂರು ವಲಯದ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಪೊಳಲಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವಬಿ ರಮಾನಾಥ ರೈ, ಶ್ರೀ ಕಾವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್ ಶೆಟ್ಟಿ, ಬೆಳ್ಳೂರು ಬಂಟರ ಸಂಘದ ಗೌರವಾಧ್ಯಕ್ಷ ಯಜಮಾನ ರತ್ನಾಕರ ಶೆಟ್ಟಿ ಮುಂಡಡ್ಕ ಗುತ್ತು,
ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನಾಥ ಚೌಟ ಬದಿಗುಡ್ಡೆ, ಬಂಟ್ವಾಳ ತಾಲೂಕು ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟ್ವಾಳ ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಐತಪ್ಪ ಆಳ್ವ ಸುಜೀರ್ ಗುತ್ತು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಬೆಳ್ಳೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಂ.ಎಫ್ ನಿರ್ದೇಶಕ ನಂದರಾಮ ರೈ, ಬಡಗಬೆಳ್ಳೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷೆ , ಕೆ.ಎಂ.ಎಫ್ ನಿರ್ದೇಶಕಿ ಸವಿತಾ ಎನ್ ಶೆಟ್ಟಿ , ಬಂಟ್ವಾಳ ಬಂಟರ ಸಂಘದ ಕಾರ್ಯದರ್ಶಿ ಸದಾನಂದ ಆಳ್ವ ಕಂಪ, ಬೆಳ್ಳೂರು ವಲಯ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜನಾರ್ಧನ ಶೆಟ್ಟಿ ಕನ್ಯಾಬೆಟ್ಟು, ಬೆಳ್ಳೂರು ಗುತ್ತು ಕ್ರಷ್ಣಪ್ರಸಾದ್ ರೈ, ವಿಶೇಷ ಆಹ್ವಾನಿತರು ಬಿಸಿರೋಡು ವಲಯದ ಬಂಟರ ಸಂಘದ ಅಧ್ಯಕ್ಷ ಶಂಕರ ಶೆಟ್ಟಿ ನಡ್ಯೋಡಿಗುತ್ತು, ವಾಮದಪದವು ವಲಯದ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಅರಳ ವಲಯದ ಬಂಟರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ರಾಯಿ, ಕಲ್ಲಡ್ಕ ವಲಯದ ಬಂಟರ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಗೊಳ್ತಮಜಲು, ಫರಂಗಿಪೇಟೆ ವಲಯದ ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಕೊಟ್ಟಿಂಜಗುತ್ತು ಮುಂತಾದವರೆಲ್ಲ ಭಾಗವಹಿಸಲಿದ್ದಾರೆ,. ಎಂದು ಬೆಳ್ಳೂರು ವಲಯದ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ತಿಳಿಸಿದ್ದಾರೆ
