ಬಂಟ್ವಾಳ: ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ಮತ್ತು ಕಟ್ಟಡ ಪರವಾನಿಗೆಯ ಕಟ್ಟಡದ ವಿನ್ಯಾಸನಕ್ಷೆಗೆ ತಾಂತ್ರಿಕ ಅನುಮೋದನೆ ಹಾಗೂ ಸ್ವಾಧೀನ ಪತ್ರದ ಕುರಿತು ಮಾಹಿತಿ ಕಾರ್ಯಾಗಾರವು ಬಂಟ್ವಾಳತಾಲೂಕು ಪಂಚಾಯತ್ ನ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಮಂಗಳೂರು ಮಹಾನಗರಪಾಲಿಕೆಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್ ಅವರುಸರ್ಕಾರದ ಇತ್ತೀಚಿನ ಆದೇಶ ಮತ್ತು ಸುತ್ತೋಲೆಗಳ ಕುರಿತು ಮಾಹಿತಿ ನೀಡಿದರು.
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಾಯತ್ರಿ ದೊಂಬರ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಜಿ ಪಂ ಯೋಜನಾ ನಿರ್ದೇಶಕರಾದ ಜಯರಾಂ ಕೆ.ಇ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ತಾರಾನಾಥ್ ಸಾಲ್ಯಾನ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು
