ಬಂಟ್ವಾಳ: ಹದಿನೆಂಟು ವರ್ಷದ ಒಳಗಿನ ಅಪ್ರಾಪ್ತರು ಯಾವುದೇ ರೀತಿಯ ಮಾದಕ ದ್ರವ್ಯ ಸೇವನೆ,ಸೈಬರ್ ಅಪರಾಧಗಳಲ್ಲಿ ತೊಡಗುವುದು ಒಳ್ಳೆಯದಲ್ಲ.ಇದರಿಂದ ಮುಂದಕ್ಕೆ ಸ್ವಾಸ್ಥ್ಯ ಸಮಾಜವನ್ನು ಕಾಣಲು ಸಾಧ್ಯವಿಲ್ಲ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್  ಠಾಣೆಯ   ಇನ್ಸ್ ಪೆಕ್ಟರ್ ಶಿವಕುಮಾರ್ ಬಿ ಹೇಳಿದರು. 

 ದ.ಕ.ಜಿಲ್ಲಾ ಪೊಲೀಸ್ ಇಲಾಖೆ,ಬಂಟ್ವಾಳ ಉಪ ವಿಭಾಗ ಮತ್ತು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯು ಜಂಟಿಯಾಗಿ ತುಂಬೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಾದಕ ವ್ಯಸನ ಮತ್ತು ಸೈಬರ್ ಕ್ರೈಮ್ ನ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

 ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಟಿ ಅವರು ಅಪ್ರಾಪ್ತ ವಿದ್ಯಾರ್ಥಿಗಳು  ವಾಹನ ಚಲಾಯಿಸುವುದು,ಹೆಲ್ಮೆಟ್ ಧರಿಸದಿರುವುದು,ತ್ರಿಬಲ್ ರೈಡಿಂಗ್‌ ಮಾಡುವುದು ಅಪರಾಧವಾಗಿದೆ. ಅಪೀಮು,ಕುಕೈನ್,ಗಾಂಜಾ ಮುಂತಾದ ವ್ಯಸನ-ವ್ವಹಾರಗಳಲ್ಲಿ ಭಾಗಿಯಾಗುವುದೂ ತಪ್ಪು. ಅಲ್ಲದೆ ಸೈಬರ್ ಅಪರಾಧ,ಪೋಕ್ಸೋ ಕಾಯಿದೆ ಇತ್ಯಾದಿಗಳ ಬಗ್ಗೆ ಅರಿವು ಮೂಡಿಸಿದರು.

ಹೆಡ್ ಕಾನ್ಸ್ ಟೇಬಲ್ ಕೃಷ್ಣ ನಾಯ್ಕ್,ಕೀರ್ತನ್ ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್,ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಂ ಜೆ ನಾಯಕ್ ಕೆ ಉಪಸ್ಥಿತರಿದ್ದರು.  ಪ್ರಾಂಶುಪಾಲ ವಿ.ಎಸ್.ಭಟ್ ಸ್ವಾಗತಿಸಿದರು.  ಉಪನ್ಯಾಸಕ ದಿನೇಶ ಶೆಟ್ಟಿ ಅಳಿಕೆ ವಂದಿಸಿದರು.

By suddi9

Leave a Reply

Your email address will not be published. Required fields are marked *