ಬಂಟ್ವಾಳ : ದೀನ್‌ ದಯಾಳ್‌ ಅಂತ್ಯೋದಯ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ , ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ದ. ಕ.ಜಿ.ಪಂ., ಬಂಟ್ವಾಳ ತಾಲೂಕು ಪಂಚಾಯತ್‌ ಹಾಗೂ ಮಾಣಿ ಗ್ರಾಮಪಂಚಾಯತ್‌ ನ ಆಶ್ರಯದಲ್ಲಿ ಮಾಣಿ ಗ್ರಾಮಪಂಚಾಯತ್‌ ನಲ್ಲಿ ಆರಂಭಗೊಂಡ ರಾಜ್ಯದ ಪ್ರಪ್ರಥಮ ಸಾವಿತ್ರಿಬಾಯಿ ಫುಲೆ ಕೌಶಲ್ಯ ಅಭಿವೃದ್ಧಿ ಕೇಂದ್ರವು ಶುಕ್ರವಾರ ಉದ್ಘಾಟನೆಗೊಂಡಿತು.


ಜಿಲ್ಲಾಪಂಚಾಯತ್‌ ಯೋಜನಾ ನಿರ್ದೇಶಕ ಜಯರಾಮ್‌ ಕೆ ಇ. ಯವರು ದೀಪಬೆಳಗಿಸಿ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಪ್ರಥಮ‌ಬಾರಿಗೆಸಾವಿತ್ರಿ ಬಾಯಿಫುಲೆ ಕೌಶಲ್ಯಾಭಿವೃದ್ಧಿ ಕೇಂದ್ರವು ಮಾಣಿಯಲ್ಲಿ ಆರಂಭಗೊಂಡಿದೆ.  ಪ್ರತಿಯೊಬ್ಬ ಮಹಿಳೆಯರ ಕೌಶಲ್ಯವನ್ನು ಗುರುತಿಸುವ ಉದ್ದೇಶದಿಂದ ಸಂಜೀವಿನಿ ಅಭಿಯಾನ ಆರಂಭವಾಗಿರುವುದರಿಂದ ಮಹಿಳಾ ಸಬಲೀಕರಣಕ್ಕೆ ಕಾರಣವಾಗುತ್ತಿದೆ ಎಂದರು.


ಮಾಣಿ ಗ್ರಾಮಪಂಚಾಯತ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿ ಮಾತನಾಡಿ, ಮಾಣಿ ಸುತ್ತಮುತ್ತಲಿನ ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಕೌಶಲ್ಯಾಭಿವೃದ್ಧಿ ಕೇಂದ್ರ ನೆರವಾಗಲಿ ಎಂದರು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿ ರಾಜ್
ಅತಿಥಿಯಾಗಿ ಭಾಗವಹಿಸಿದ್ದರು‌.


ಇದೇ ವೇಳೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮಾಣಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಮಾಣಿಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಾಣಿ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ 15 ದಿನಗಳ ಕಾಲ ನಡೆದ ಎಂಬ್ರಾಯ್ಡರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ನಡೆಸಲಾಯಿತು, ಕಲಿಕಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್‌ ಕುಮಾರ್‌ , ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ, ಗ್ರಾ.ಪಂ.ಉಪಾಧ್ಯಕ್ಷೆ ಸುಜಾತ, ಮಾಣಿಕ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ವಿಜಯ, ಮಾಣಿ ಬ್ಯಾಂಕ್ ಆಫ್ ಬರೋಡದ‌ ಮ್ಯಾನೇಜರ್ ಅಭಿಲಾಷ್, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಿರಿಜ , ತರಬೇತುದಾರರಾದ ಮೀನಾಕ್ಷಿ, ದೀಕ್ಷಾ, ಅಕ್ಷಿತಾ, ಎಂಬಿಕೆ ಸ್ವಾತಿ ಹಾಗೂ ಮಾಣಿ ಗ್ರಾಮಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.


ತಾಲೂಕು ವ್ಯವಸ್ಥಾಪಕಿ ಸುಧಾ ಪ್ರಸ್ತಾವನೆಗೈದರು‌.ಸಮುದಾಯ ಸಂಪನ್ಮೂಲ ವ್ಯಕ್ತಿ ಲೈಲಾ ಸ್ವಾಗತಿಸಿ, ವಂದಿಸಿದರು. ಮಾಣಿ ಗ್ರಾ.ಪಂ.ಸದಸ್ಯ ಬಾಲಕೃಷ್ಣ ಆಳ್ವ ಕಾರ್ಯಕ್ರಮ‌ ನಿರ್ವಹಿಸಿದರು. ತಾ.ಪಂ.ಸಿಬ್ಬಂದಿಗಳಾದ ದೀಕ್ಷಿತಾ, ಸಾಂಘವಿ ಸಹಕರಿಸಿದರು.

By suddi9

Leave a Reply

Your email address will not be published. Required fields are marked *