ಬಂಟ್ವಾಳ: ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮಹಾಸಭೆಯಲ್ಲಿ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ “ಅತ್ಯುತ್ತಮ ಮೂರ್ತೆದಾರರ ಸಹಕಾರಿ ಸಂಘ”ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಂಘದ ಅಧ್ಯಕ್ಷರಾದ ಶ್ರೀ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷರಾದ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ್ ಕುಮಾರ್ ಸೊರಕೆ. ಶಿವಪ್ಪ ಸುವರ್ಣ, ಅಣ್ಣಿ ಯಾನೆ ನೋಣಯ್ಯ, ವಿಶ್ವನಾಥ ಪೂಜಾರಿ ಪಂಜ, ವಿಶ್ವನಾಥ ಬಿ, ಆರ್ ಸಿ ನಾರಾಯಣ್ ಪುರುಷ ಎನ್ ಸಾಲಿಯಾನ್, ಬೇಬಿ ಕುಂದರ್, ಪದ್ಮಾನಾಭ ಕೋಟ್ಯಾನ್, ಹರೀಶ್ ಸುವರ್ಣ, ಗಣೇಶ್ ಪೂಜಾರಿ, ಉಷಾ ಅಂಚನ್, ಶೈಲಜಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಿಶೋರ್ ಕುಮಾರ್.ಹಾಗೂ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ,ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ ಶ್ರೀಮತಿ ಕೆ ಸುಜಾತ ಎಂ ಆಶೀಶ್ ಪೂಜಾರಿ, ಎ.ಜಿ.ಎಂ ಶಿಲ್ಪಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು
