ತುಂಬೆ – ಪುದು ಉಪ ಆರೋಗ್ಯ ಕೇಂದ್ರಕ್ಕೆ ಡಾ. ಪದ್ಮನಾಭ ಕಾಮತ್ ರಿಂದ ಇಸಿಜಿ ಉಪಕರಣ ಹಸ್ತಾಂತರ
ಬಂಟ್ವಾಳ: ಕೆಎಂಸಿ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ಅವರು ಶುಕ್ರವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ, ತುಂಬೆ ಗ ಮತ್ತು ಪುದು ಗ್ರಾಮದಲ್ಲಿರುವ ಉಪ ಆರೋಗ್ಯ ಕೇಂದ್ರಕ್ಕೆ ಹೃದಯಕ್ಕೆ ಸಂಬಂಧ ಪಟ್ಟ ತಪಾಸಣೆಗಾಗಿ “ಇಸಿಜಿ” ಉಪಕರಣವನ್ನು ಹಸ್ತಾಂತರಿಸಿ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಮಸ್ಥರು ಈ ಉಪಕರಣದ ಸದುಪಯೋಗವನ್ನು ಪಡೆದು ಕೊಳ್ಳುವಂತೆ ಮನವಿ ಮಾಡಿದರು.
ಮಾಜಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮತ್ತಿತರರು ಹಾಜರಿದ್ದರು.



