ಪುಂಚೋಡಿ ನಾಗಬನದಿಂದ ಶ್ರೀ ಕ್ಷೇತ್ರ ಕಟೀಲಿಗೆಪಾದಯಾತ್ರೆ
ಬಂಟ್ವಾಳ: ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಆಶ್ರಯದಲ್ಲಿ ನಿರಂತರ 48ನೇ ವರ್ಷದ ಸತ್ಯನಾರಾಯಣ ಪೂಜೆ,ಆಶ್ಲೇಷ ಬಲಿ,ಕಟೀಲು ಮೇಳದ ಯಕ್ಷಗಾನ ಬಯಲಾಟ ನಡೆಯುತಿದ್ದು,ಇದರ ಭಾಗವಾಗಿ ಪುಂಚೋಡಿ ನಾಗಬನದಿಂದ ಶ್ರೀ ಕ್ಷೇತ್ರ ಕಟೀಲಿಗೆ ಮೂರನೇ ವರ್ಷದ ಪಾದಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಭಗವದ್ಬಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.



