ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ ರಮಾನಾಥ ರೈ
ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಅವರ ಘೋಷಣೆ, ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಿ ಪರಿಣಮಿಸಿತು ಮತ್ತು ಆತ್ಮವಿಶ್ವಾಸದಿಂದ ಬದುಕುವಂತೆ ಪ್ರೇರೇಪಿಸಿತು.

ನಾರಾಯಣಗುರುಗಳ ತತ್ವಗಳು ಇಂದಿಗೂ ಸಾಮಾಜಿಕ ನ್ಯಾಯ, ಸಹಿಷ್ಣುತೆ ಮತ್ತು ಸಮಾನತೆಗಾಗಿ ದಾರಿದೀಪವಾಗಿ ಬೆಳಗುತ್ತಿವೆ. ಅವರ ಸಂದೇಶಗಳು ನಮ್ಮನ್ನು ಮಾನವೀಯತೆ ಮತ್ತು ಸಹಭಾಗಿತ್ವದ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸುತ್ತವೆ ಎಂದು ಮಾಜಿ ಸಚಿವರಾದ ಬಿ ರಮಾನಾಥ ರೈ ಹೇಳಿದರು
ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಮನೋಹರ್ ಕುಲಾಲ್ ನೆರಂಬೋಳು ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 56ರ ಭಜನಾ ಸಂಕೀರ್ತನೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯ , ನ್ಯಾಯವಾದಿ ಸುರೇಶ್ ಕುಮಾರ್ ಗುರು ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪ್ರಮುಖರಾದ ಮಚ್ಚೇಂದ್ರ ಸಾಲ್ಯಾನ್, ಲಕ್ಷ್ಮಣ ಅಗ್ರಬೈಲು, ಪುರಸಭೆಯ ಮಾಜಿ ಸದಸ್ಯ ಸದಾಶಿವ ಬಂಗೇರ, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ, ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಮಹೇಶ್ ಬೊಳ್ಳಾಯಿ ರಂಜಿತ್ ಬಿ.ಸಿ.ರೋಡ್, ಚಿನ್ನಾ ಕಲ್ಲಡ್ಕ, ಸಂಘಟನಾ ಕಾರ್ಯದರ್ಶಿ ಯಶೋಧರ ಕಡಂಬಳಿಕೆ, ಸದಸ್ಯರಾದ
ನವೀನ್ ಕುಡ್ಮೇರು, ಆನಂದ ಪೂಜಾರಿ ಅಜ್ಜಿಬೆಟ್ಟು, ಸುದೀಪ್ ಸಾಲ್ಯಾನ್ , ನವೀನ್ ಕಾರಾಜೆ, ನಾರಾಯಣ ಪಲ್ಲಿಕಂಡ,ಯತೀಶ್ ಬೊಳ್ಳಾಯಿ, ನಾಗೇಶ್ ಪೂಜಾರಿ ಏಲಾಬೆ, ಪ್ರಶಾಂತ್ ಅಮೀನ್ ಏರಮಲೆ, ವಿಘ್ನೇಶ್ ಬೊಳ್ಳಾಯಿಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ಅರುಣ್ ಕುಮಾರ್, ನಾಗೇಶ್ ಪೊನ್ನೋಡಿ, ಹರೀಶ್ ಕೋಟ್ಯಾನ್ ಕುದನೆ, ರಾಜೇಶ್ ಸುವರ್ಣ ಸಲಹೆಗಾರ ರಾಮಚಂದ್ರ ಸುವರ್ಣ ತುಂಬೆ ಮತ್ತಿತರರು ಉಪಸ್ಥಿತರಿದ್ದರು
ಭಜನಾ ಕಾರ್ಯದಲ್ಲಿಸಾತ್ವಿಕ್ ದೇರಾಜೆ,ರಾಜೇಶ್ ಅಮ್ಟೂರು, ವಿನಯ ಆಚಾರ್ಯ ಸಹಕರಿಸಿದರು
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ವಂದಿಸಿದರು. ನಿಕಟಪೂರ್ವ ಅಧ್ಯಕ್ಷ
ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.



