ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತ ಸಂಭ್ರಮದ ನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ
ಬಂಟ್ವಾಳ : ಸಂಘ-ಸಂಸ್ಥೆ , ಸಂಘಟನೆಯನ್ನು ಅಸ್ತಿತ್ವಕ್ಕೆ ತರುವುದು ಸುಲಭ ಆದರೆ ಅದು ದೀರ್ಘ ಕಾಲದವರೆಗೂ ಜೀವಂತಿಕೆಯಿಂದಿದ್ದು ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಮುಖಿ ಕಾರ್ಯ ಮಾಡುವ ಮನೋಭಾವ ಎಲ್ಲರಲ್ಲೂ ಮೂಡಿ ಬರಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಭಾನುವಾರ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ 25 ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಅನಂತಾಡಿ ಕ್ರಾಸ್ ರಸ್ತೆಯ ಬಳಿ ನೂತನವಾಗಿ ನಿರ್ಮಿಸಿರುವ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೈದು ಅವರು ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜ ಸೇವೆಯ ಮನೋಭಾವನೆ ಬೆಳೆಸುವುದು ತುಂಬಾ ಕಷ್ಟದ ಕೆಲಸ, ಇಂತಹ ಪರಿಸ್ಥಿತಿಯಲ್ಲೂ ಕಳೆದ 25 ವರ್ಷಗಳಿಂದ ಗ್ರಾಮದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ರಜತ ಸಂಭ್ರಮದ ನೆನಪಿಗಾಗಿ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿ ಸಮಾಜಕ್ಕೆ ಅರ್ಪಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಶ್ರೀ ಗೆಳೆಯರ ಬಳಗದ ಅಧ್ಯಕ್ಷ ರಮೇಶ್ ಗೌಡ ಮೈರಾ ವಹಿಸಿದ್ದರು.
ಶ್ರೀ ಗಿಲ್ಕಿಂಜತಾಯಿ ಉತ್ಸವ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ತೆಕ್ಕಿಪಾಪು, ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರಾದ ದಿನೇಶ್ ಪೂಜಾರಿ, ಸಂದೀಪ್ ಕೆಲಿಂಜ, ಜಯಂತಿ ಜನಾರ್ಧನ್, ಮೀನಾಕ್ಷಿ ಸುನಿಲ್ ಪಿ ಡಬ್ಲ್ಯೂ ಕಂಟ್ರಾಕ್ಟರ್ ಪದ್ಮನಾಭ ಗೌಡ ಮೈರ, ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ ಬೆತ್ತಸರವು, ಸದಸ್ಯರುಗಳಾದ ನಾರಾಯಣ ಮೂಲ್ಯ, ಕೇಶವ ನಾಯ್ಕ ಕೆಮ್ಮಟೆ,ಆನಂದ ಮೂಲ್ಯ ಮೈರಾ,ಶ್ರೀ ಶಾರದಾ ಭಜನಾ ಮಂದಿರದ ಸಂಚಾಲಕ ನಾರಾಯಣ ಭಟ್, ರುಕ್ಮಯ ಮೂಲ್ಯ ಮೈರಾ, ಮಂಜಪ್ಪ ಮೂಲ್ಯ ಮೈರಾ, ಇಂಜಿನಿಯರ್ ರಾಮಣ್ಣ ಮೂಲ್ಯ ಮಜಿ, ಸಂಜೀವ ಮೂಲ್ಯ ಮಜಿ, ಚಂದ್ರಶೇಖರ್ ಶೆಟ್ಟಿ,ಕೇಶವ ಮೂಲ್ಯ ಮಜಿ, ಕರುಣಾಕರ ಆಳ್ವ ಮೈರಾ, ಮೊದಲಾದವರು ಉಪಸ್ಥಿತರಿದ್ದರು.
ಮಾತೃಶ್ರೀ ಗೆಳೆಯರ ಬಳಗದ ಸುಧಾಕರ ಮೈರಾ ಸ್ವಾಗತಿಸಿ, ಕಾರ್ಯದರ್ಶಿ ಕಿಶೋರ್ ಮೈರಾ ವಂದಿಸಿದರು.ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಮಾತೃಶ್ರೀ ಗೆಳೆಯರ ಬಳಗದ ಸದಸ್ಯರುಗಳು ಸಹಕರಿಸಿದರು



