Published On: Tue, Nov 11th, 2025

ಕಬಡ್ಡಿ ಪಂದ್ಯಾಟಕ್ಕೆ ತರುಣ್ ಜಿ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ:   ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಢಯಲೊರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ   ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್  ಆಯ್ಕೆಯಾಗಿದ್ದಾನೆ.


ಈತ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.
ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿದ್ದ.
.ಈತ ಬಂಟ್ವಾಳ ತಾಲೂಕಿನ  ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ದಂಪತಿ ಪುತ್ರನಾಗಿದ್ದಾನೆ. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter