ಬಂಟ್ವಾಳ :ಇಲ್ಲಿನ ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಂಘದ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್ ಸ್ವಸ್ತಿಕ್, ಅನೀಶ್ ಕೋಟ್ಯಾನ್, ಜೊತೆಕಾರ್ಯದರ್ಶಿಯಾಗಿ ಮಾಧವ ಕುಲಾಲ್, ಸತ್ಯನಾರಾಯಣ ರಾವ್, ಸಂಘಟನಾ ಕಾರ್ಯದರ್ಶಿಯಾಗಿ ಭಾಸ್ಕರ ಕುಲಾಲ್, ಉದಯ ಕುಲಾಲ್ ಅಜೆಕಲ, ಗೌರವಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್, ಗೌರವ ಸಲಹೆಗಾರರಾಗಿ ರವಿರಾಜ್ ಶೆಟ್ಟಿ ಮತ್ತು ಯಶವಂತ ವಿಟ್ಲ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
