ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ಸಮಾರಂಭವು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಮಾತನಾಡಿ ಈ ರೀತಿಯ ಕಾರ್ಯಕ್ರಮದ ಅವಕಾಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಇದು ಉತ್ತಮ ವ್ಯಕ್ತಿತ್ವವನ್ನು ನಿರ್ಮಿಸಲು ಸಹಾಯಕವಾಗುವುದು ಎಂದರು.

ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಗೋಪಾಲ್ ಎಂ ,ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ರವಿರಾಜ್ , ಶ್ರೀರಾಮ ಇಂಗ್ಲೀಷ್ ಮೀಡಿಯಂ ಸ್ಕೂಲ್ಉಪ ಪ್ರಾಂಶುಪಾಲರಾದ ಕು.ಶ್ವೇತಾ , ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು. ಕೀರ್ತನ ಕಾರ್ಯಕ್ರಮ ನಿರೂಪಿಸಿದರು. ಕು. ಧನ್ಯಾ ವಂದಿಸಿದರು.



