ಬಂಟ್ವಾಳ :ಸದಾಶಿವ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯ “ಅಡುವೆಂಚರ್” ಶಿಕ್ಷಣ ಸಂಸ್ಥೆಯ ಎಡು -ಕ್ವೆಸ್ಟ್ ಶೀರ್ಷಿಕೆಯಡಿಯಲ್ಲಿ ನಡೆಸಲಾಗುವ ವಿದ್ಯಾರ್ಥಿ ವೇತನದ ಪರೀಕ್ಷೆಯ 2026 ರ ಸಾಲಿನಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಗೌರವಿಸುವ ಕಾರ್ಯಕ್ರಮ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ, ಹಾಸನ, ಚಿಕ್ಕಮಂಗಳೂರು, ಮಂಡ್ಯ ಹಾಗೂ ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಮೊದಲ ಹತ್ತು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ಇದರ ಸ್ಥಾಪಕರಾದ ಡಾ. ಮಂಜುನಾಥ್ ಭಂಡಾರಿ ಅವರು ಮಾತನಾಡಿ, ವಿದ್ಯಾರ್ಥಿಗಳ ನೈಜ ಪ್ರತಿಭೆಯ ಅನಾವರಣಕ್ಕೆ ಮುಕ್ತವಾದ ಅವಕಾಶಗಳನ್ನು ಒದಗಿಸಬೇಕು, ಪೋಷಕರು ತಮ್ಮ ಆಲೋಚನೆಗಳನ್ನು ಮಕ್ಕಳ ಮೇಲೆ ಹೇರಬಾರದು ಎಂದು ಕಿವಿಮಾತು ಹೇಳಿದರು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್ಮೆಂಟ್ ಇದರ ಟ್ರಸ್ಟಿ ಜಗನ್ನಾಥ್ ಚೌಟ ಅತಿಥಿಯಾಗಿದ್ದರು.ಸದಾಶಿವ ಶಿಕ್ಷಣ ಪ್ರತಿಷ್ಠಾನದದ ಅಧ್ಯಕ್ಷ ಅಮೃತ್ ರೈ ಅಧ್ಯಕ್ಷತೆ ವಹಿಸಿದ್ದರು.
ಹಾಸನ ಜಿಲ್ಲೆಯ ನಿರೂಪ್ ಬಾಬು ಯು. ಕೆ., ಸುಜನ್ ಎಂ, ದಕ್ಷಿಣ ಕನ್ನಡ ಜಿಲ್ಲೆಯ ಮೇಘಾ ಜಿ ಪೂಜಾರಿ, ವರ್ಷಾ ನಾಗರಾಜ್ ಚಾಟರ್, ಚಿಕ್ಕ ಮಂಗಳೂರು ಜಿಲ್ಲೆಯ ಸ್ಕಂದ ಸಿದ್ದಾರ್ಥ್ , ಝಯಿಮಾ ದಹಿಯಾ,ಶಿವಮೊಗ್ಗ ಜಿಲ್ಲೆಯ ಸಾಯಿಕಿರಣ್ , ಹರಿ ಕಿರಣ್ ಎ.ಕೆ,
ಮಂಡ್ಯ ಜಿಲ್ಲೆಯ ಶ್ರೇಯಾ.ಆರ್ .,
ಮಿಥುನ್ ಎಸ್ ಅನುಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಪ್ರಥಮ ಸ್ಥಾನ ಪಡೆದವರಿಗೆ ಒಂದು ಲಕ್ಷ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಐವತ್ತು ಸಾವಿರ ರೂ. ಗಳ ನಗದು ಬಹುಮಾನ ಸೇರಿದಂತೆ ಏಳೂವರೆ ಲಕ್ಷ ನಗದು ಬಹುಮಾನ ವಿತರಿಸಲಾಯಿತು.
ಪ್ರತಿಷ್ಠಾನದ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ ಸ್ವಾಗತಿಸಿದರು. ಕೋಶಾಧಿಕಾರಿ ಅಶ್ವಥ್ ರೈ, ಟ್ರಸ್ಟಿಗಳಾದ ಸಮತಾ ಕಿಶೋರ್ , ದೀಪಿಕಾ ಸಂದೇಶ್ ಸನ್ಮಾನ ಪತ್ರವಾಚಿಸಿದರು. ಉಪನ್ಯಾಸಕಿ ಕೀರ್ತನಾ ರಾವ್ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಮಹೇಶ್ ಕೆ. ಎನ್ ಪುತ್ತೂರು ವಂದಿಸಿದರು, ಉಪನ್ಯಾಸಕ ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
