ಬಂಟ್ವಾಳ :  ದೃಢ ನಿರ್ಧಾರವೊಂದಿದ್ದರೆ ನಮ್ಮನ್ನು ಯಾವನೇ ವ್ಯಕ್ತಿಯಿಂದ ತಪ್ಪು ದಾರಿಗೆ ಎಳೆಯಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದ್ದಾರೆ.

 

ಬಂಟ್ವಾಳ‌ತಾಲೂಕಿನ‌ ವಾಮದಪದವು ಬಸ್ತಿಕೋಡಿ ಶ್ರೀ ಪದ್ಮಾವತಿ ಅಮ್ಮ ಸಭಾಭವನದಲ್ಲಿ ಜರಗುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2076ನೇ ಮದ್ಯವರ್ಜನ ಶಿಬಿರದ 4 ನೇ ದಿನ ಸೋಮವಾರ ಭೇಟಿ ನೀಡಿ ಅವರು ಶಿಬಿರಾರ್ಥಿಗಳನ್ನದ್ದೇಶಿಸಿ ಮಾತನಾಡಿದರು.


ಜೀವನ ಎನ್ನುವುದು ದೇವರಿಂದ ಕೊಡಲ್ಪಡುವ ಬಹುದೊಡ್ಡ ಅವಕಾಶ. ಭೂಮಿಯ ಮೇಲಿರುವ ಸಕಲ ಜೀವರಾಶಿಗಳಲ್ಲಿ ಶ್ರೇಷ್ಠ ಯಾರೆಂದರೆ ಅದು ಮನುಷ್ಯ, ಆದರೆ ಅತೀ ಹೆಚ್ಚು ತಪ್ಪು ಮಾಡುವವರು ಕೂಡಾ ಮನುಷ್ಯರೇ ಆಗಿದ್ದು, ನಮ್ಮನ್ನು ನಾವು ತಿಳಿದುಕೊಂಡು, ನಮ್ಮ ಜವಾಬ್ದಾರಿ ಏನೆಂಬುದನ್ನು ಅರಿತು ಜೀವಿಸಿದರೆ ಜೀವನಕ್ಕೆ ಅರ್ಥ ಬರಬಹುದು. ಇಲ್ಲದಿದ್ದರೆ ಜೀವನ ವ್ಯರ್ಥ ಎಂದು ಅವರು ಅಭಿಪ್ರಾಯಪಟ್ಟರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರ ನಿಜಕ್ಕೂ ಅರ್ಥಪೂರ್ಣವಾಗಿದ್ದು, ಇದರ ಸದುಪಯೋಗವನ್ನು ಶಿಬಿರಾರ್ಥಿಗಳೆಲ್ಲರೂ ಪಡೆದುಕೊಂಡು, ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಬೇಕು ಎಂದು ಅವರು ಹೇಳಿದರು.


ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಗೌರವಾಧ್ಯಕ್ಷರಾದ  ಹರೀಂದ್ರ ಪೈ,ತಾಲೂಕು ಯೋಜನಾಧಿಕಾರಿ ಜಯಾನಂದ.ಪಿ.,ಸಮಿತಿಯಉಪಾಧ್ಯಕ್ಷ ಪ್ರವೀಣ್ ಕಾಡಬೆಟ್ಟು, ಉಪಸ್ಥಿತರಿದ್ದರು.
ಶಿಬಿರದಲ್ಲಿ 67 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.ಶಿಬಿರಾಧಿಕಾರಿ ರಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. 

By Suddi9

Leave a Reply

Your email address will not be published. Required fields are marked *