ಬಂಟ್ವಾಳ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ ೨೦೨೬ರ ಫಲಿತಾಂಶದಲ್ಲಿ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅತ್ಯುತ್ತಮ ಸಾಧನೆ ಮಾಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ
 
ಕಲ್ಲಡ್ಕದ ದಾಸಕೋಡಿಯ ಚಂದ್ರಶೇಖರ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿರುವ ವಾಸವಿ, ಪರೀಕ್ಷೆಯಲ್ಲಿ ಒಟ್ಟು ೭೨೦ ಅಂಕಗಳಲ್ಲಿ ೬೩೦ ಅಂಕಗಳನ್ನು ಪಡೆದು, ರಾಷ್ಟ್ರ ಮಟ್ಟದಲ್ಲಿ ೩೪೯೪ನೇ ಆಲ್ ಇಂಡಿಯಾ ರ‍್ಯಾಂಕ್ ಗಳಿಸಿದ್ದಾರೆ. 
 
ವಾಸವಿ ಅವರ ಈ ಸಾಧನೆಗೆ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದು, ಮುಂದಿನ ವೈದ್ಯಕೀಯ ಶಿಕ್ಷಣದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಯು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.

By Suddi9

Leave a Reply

Your email address will not be published. Required fields are marked *