ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ಕುಟುಂಬ ಮಿಲನ ಕಾರ್ಯಕ್ರಮ ಬಂಟ್ವಾಳದ ಭಂಡಾರಿ ಭವನದಲ್ಲಿ ನಡೆಯಿತು.
ಜೆಸಿಐ ವಲಯ ತರಬೇತುದಾರರು, ವಕೀಲರಾದ ಆಶಾಮಣಿ ಡಿ. ರೈ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕವಾಗಿ ಕಷ್ಟ ಬಂದಾಗ ಮಾನಸಿಕವಾಗಿ ನೆಮ್ಮದಿಯಿಂದ ಇರಲು ಸಾಧ್ಯವಿದೆ. ಗ್ಯಾರೇಜು ಮಾಲಕರ ಸಂಘದ ಸದಸ್ಯರು ತಮ್ಮ ಸಂಘಟನೆಯನ್ನು ಬಲಪಡಿಸಿಕೊಂಡು ಇಂತಹ ಕಾರ್ಯಕ್ರಮದ ಮೂಲಕ ಎಲ್ಲರಿಗೂ ವೇದಿಕೆಯ ಅವಕಾಶ ಹಾಗೂ ತಮ್ಮ ಪ್ರತಿಭೆ ಅನಾವರಣ ಮಾಡಲು ಅವಕಾಶ ನೀಡುತ್ತಿರುವುದು ಅಭಿನಂದನೀಯ ಎಂದರು.

