
ಕಠಿಣ ಪರಿಶ್ರಮದ ತಾಂತ್ರಿಕ ಕಲಿಕೆಯು ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗದ ಸಮಯದಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ವೀರಣ್ಣ ಗೌಡ K M – EV Technical Support Engineer, TVS Motors Company ಇವರು ತಮ್ಮ ಭಾಷಣದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಡಾ. ಎ. ರಾಜೇಂದ್ರ ಶೆಟ್ಟಿ, ಕಾರ್ಯದರ್ಶಿಗಳು, ಅಂಗವಿಕಲರ ಕಲ್ಯಾಣ ಸಂಸ್ಥೆ (ರಿ), ಮಂಗಳೂರು ಇವರು ವಹಿಸಿದರು.
ಈ ಕಾರ್ಯಕ್ರಮಕ್ಕೆ ಮಂಗಳಜ್ಯೋತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಯುತ ನರೇಶ ಮಲ್ಲಿಗೆಮಾಡು ಮಂಗಳಜ್ಯೋತಿ ಸಮಗ್ರ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಾಕ್ಷಿ ಇವರು ಉಪಸ್ಥಿತರಿದ್ದರು.
ಸ್ವಾಗತ ಭಾಷಣವನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಯುತ ನರೇಂದ್ರ ಇವರು ನೆರವೇರಿಸಿದರು. ನೀತಿ ನಿಯಮಗಳನ್ನು ಶ್ರೀಮತಿ ಪ್ರಫುಲ್ಲ , ತರಬೇತಿ ಅಧಿಕಾರಿ ಇವರು ನೆರವೇರಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಸುರೇಖ ನಿರೂಪಿಸಿದರು. ಹಾಗೂ ಶ್ರೀಯುತ ಗಿರೀಶ್ ಧನ್ಯವಾದಾರ್ಪಣೆಗೈದರು.
ಸಂಸ್ಥೆಯ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
