ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಮತ್ತು ಶ್ರೀ ಶಾರದಾ ಉತ್ಸವ ಸಮಿತಿ ನೇತೃತ್ವದಲ್ಲಿ  ಬೃಹತ್ ರಕ್ತದಾನ ಶಿಬಿರವು ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕೊಳಕಿರ್ದ ತುಡರ್,  ಸುರಕ್ಷಾ ಸಂಗಮ ಪೂರ್ಲಿಪ್ಪಾಡಿ ಮತ್ತು ತ್ರಿಶೂಲ್ ಫ್ರೆಂಡ್ಸ್ ರಾಯಪ್ಪಕೋಡಿ ಇವರ ಸಹಕಾರದೊಂದಿಗೆ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಬಾಗಿತ್ವದಲ್ಲಿ ಶಿಬಿರ ನಡೆಸಲಾಯಿತು.
ಡಾ. ಮನೋಜ್ ಶಿಬಿರದ ಉದ್ಘಾಟನೆ ನೆರವೇರಿಸಿದರು.ಡಾ. ಸುಕೇಶ್ ಸಭಾಧ್ಯಕ್ಷತೆ ವಹಿಸಿದ್ದರು.

, ಡಾ. ಪ್ರಶಾಂತ್ , ಶ್ರೀ ಶಾರದಾ ಉತ್ಸವ ಸಮಿತಿಯ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಕೊಳಕಿರ್ದ ತುಡರ್ ಇದರ ಉಪಾಧ್ಯಕ್ಷರಾದ ಡಾ.  ನವ್ಯಪ್ರಶಾಂತ್, ಜಗದೀಶ್ ಕೊಳಕಿರ್, ಸುರಕ್ಷಾ ಸಂಗಮದ ಗೌರವಾಧ್ಯಕ್ಷರಾದ ವೆಂಕಟ್ರಾಯ ಪ್ರಭು, ತ್ರಿಶುಲ್ ಫ್ರೆಂಡ್ಸ್ ನ ಗೌರವ ಸಲಹೆಗಾರರಾದ ಜಗದೀಶ್ ಬಜ್ಜರ್, ಗೌರವಾಧ್ಯಕ್ಷರಾದ ಗೋಪಾಲ್ ಕಲ್ಲಡ್ಕ ಉಪಸ್ಥಿತರಿದ್ದರು.

ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಯತೀನ್ ಕುಮಾರ್ ಪಂಚವಟಿ ಸ್ವಾಗತಿಸಿದರು, ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ವಂದಿಸಿದರು.  ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.ಶಿಬಿರದಲ್ಲಿ
ಸುಮಾರು 95 ಮಂದಿ ರಕ್ತದಾನಗೈದರು. 

By Suddi9

Leave a Reply

Your email address will not be published. Required fields are marked *