ಬಂಟ್ವಾಳ: ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್‌ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಸಮೀಪದ ಕಂದೂರು- ಪೆಲತ್ತಕಟ್ಟೆ ಎಂಬಲ್ಲಿ  ಭಾನುವಾರ ರಾತ್ರಿ ಸಂಭವಿಸಿದೆ.


ಮೃತ ಯುವಕನನ್ನು ಪಾಣೆಮಂಗಳೂರು ಸಮೀಪದ ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ರಶಿಕ್ ನಂದಾವರ ಶಾಲಾ ಸಮೀಪ ಗ್ಯಾರೇಜ್‌ ನಡೆಸುತ್ತಿದ್ದು, ಈತ ಭಾನುವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.


ಪರಿಣಾಮ ಗಂಭೀರ ಗಾಯಗೊಂಡಿದ್ದ ರಶೀಕ್ ನನ್ನು ತಕ್ಷಣ ಸ್ಥಳೀಯರು  ದೇರಳಕಟ್ಟೆಯ ಆಸ್ಪತ್ರೆಯೊಂದಕ್ಕೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳೀಯವಾಗಿ ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಯುವಕನಾಗಿದ್ದ ರಶೀಕ್  ತಂದೆ, ತಾಯಿ, ಸಹೋದರ-ಸಹೋದರಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.



ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *