ಬಂಟ್ವಾಳ : ಪುಂಜಾಲಕಟ್ಟೆ ಇಲ್ಲಿಗೆ ಸಮೀಪದ ಶ್ರೀ ರಾಮನಗರ ಶ್ರೀರಾಮ ಭಜನ ಮಂದಿರದ ಜೀರ್ಣೋದ್ಧಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಪೂರ್ವಭಾವಿ ಸಮಾಲೋಚನಾ ಸಭೆ ಮಂದಿರದ ವಠಾರದಲ್ಲಿ ಜರಗಿತು.
4

ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಅವರು ಮಾತನಾಡಿ ಭಜನ ಮಂದಿರಗಳು ಗ್ರಾಮದ ಅಭಿವೃದ್ಧಿಗೆ ಪೂರಕವಾಗಿದ್ದು ಗ್ರಾಮಸ್ಥರೆಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ವೇಳೆ ಅವರು ಜೀರ್ಣೋದ್ಧಾರ ಕಾರ್ಯಕ್ಕೆ ಪ್ರಥಮ ಸಹಾಯಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು. ಸ್ವಾಮೀಜಿ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಹಾಗೂ ಇತರ ಪದಾಕಾರಿಗಳ ಆಯ್ಕೆ ನಡೆಯಿತು.
ಭಜನ ಮಂದಿರದ ಉಪಾಧ್ಯಕ್ಷ ಗಂಗಾಧರ, ಗ್ರಾ.ಪಂ.ಸದಸ್ಯ ಚಂದ್ರಶೇಖರ ಶೆಟ್ಟಿ , ಪ್ರಕಾಶ ರಾವ್ ನಯನಾಡು
ಮತ್ತಿತರರು ಉಪಸ್ಥಿತರಿದ್ದರು.
ಭಜನ ಮಂದಿರದ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ ಅವರು ಸ್ವಾಗತಿಸಿದರು. ಕಾರ್ಯದರ್ಶೀ ಹೇಮಂತ್ ವಂದಿಸಿದರು.

By suddi9

Leave a Reply

Your email address will not be published. Required fields are marked *