ತುಳು ಚಿತ್ರರಂಗಕ್ಕೆ ಈಗ ಸಂಕ್ರಮಣ ಕಾಲ 43 ವರ್ಷಗಳ ಇತಿಹಾಸದಲ್ಲಿ 53 ಸಿನಿಮಾಗಳು ತೆರೆ ಕಂಡಿವೆ. 2014ರ ವರ್ಷದಲ್ಲೇ 7 ತುಳು ಚಿತ್ರಗಳು ತೆರೆ ಕಂಡಿದೆ. ಈ ವರ್ಷ ತುಳು ನಾಡಿನ ಜನರನ್ನು ನಗಿಸಲು ಸಿದ್ದವಾಗುತ್ತಿದೆ ಇನ್ನೊಂದು ಕಾಮಿಡಿ ಫಿಲ್ಮ್ ಸುಪರ್ ಮರ್ಮಯೆ. ಈ ಸಿನಿಮಾ ಏಪ್ರಿಲ್ ತಿಂಗಳಲ್ಲಿ ತೆರೆಕಾಣಲಿದೆ. ಎಡಿಟಿಂಗ್ ಕಾರ್ಯ ಮುಗಿದಿದ್ದು ಈಗ ಸಿನಿಮಾ ಡಬ್ಬಿಂಗ್ ಹಂತದಲ್ಲಿದೆ.
700ಕ್ಕೂ ಹೆಚ್ಚು ಹಿಂದಿ, ಮರಾಠಿ, ಗುಜರಾತಿ, ಕನ್ನಡ, ತೆಲುಗು, ತಮಿಳು ಚಲನ ಚಿತ್ರಗಳಲ್ಲಿ ಸ್ಟಂಟ್ ಮಾಸ್ಟರ್ ಆಗಿ ದುಡಿದಿರುವ ಆಮರ್, ಗದ್ದಾರ್, ಜಾಗೃತಿ, ಕತರ್ನಾಕ್ ನಂತಹ ಹಿಂದಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ರಾಮ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ ಸೂಪರ್ ಮರ್ಮಯೆ.
ರಾಮ್ ಶೆಟ್ಟಿ ತುಳು ಚಿತ್ರರಂಗಕ್ಕೆ ಹೊಸಬರೇನಲ್ಲ ಇವರು ಈಗಾಗಲೇ ಮೂರು ಉತ್ತಮ ತುಳು ಚಿತ್ರಗಳನ್ನು ನೀಡಿರುವವರು. 2012ರಲ್ಲಿ ಬಂಗಾರ್ದ ಕುರಲ್ ಭಕ್ತಿ ಪ್ರಧಾನ ಚಿತ್ರ ನಿರ್ಮಿಸಿದ್ದ ಶೆಟ್ಟರು 1982 ಮತ್ತು 83ರಲ್ಲಿ ಬದ್ಕೆರ್ ಬುಡ್ಲೆ ಮತ್ತು ದಾರೆದ ಸೀರೆ ನಿಮರ್ಿಸಿದ್ದರು. ಈ ಎರಡೂ ಚಿತ್ರಗಳು ಇಂದಿಗೂ ತುಳುವರ ಮನದಿಂದ ಅಳಿದಿಲ್ಲ. ತುಳುವರಲ್ಲಿ ಭಕ್ತಿ ಹೆಚ್ಚು ಎಂದುಕೊಂಡು ಭಕ್ತಿ ಪ್ರದಾನ ಚಿತ್ರ ನೋಡಬಹುದು ಎಂಬ ನಿರೀಕ್ಷೆ ಯೊಂದಿಗೆ ಬಂಗಾರ್ದ ಕುರಲ್ ನಿರ್ಮಿಸಿದ ಅದರಲ್ಲಿ ಸ್ಟಂಟ್ ಕೂಡ ಇತ್ತು. ತುಳುವರದ್ದೇನಿದ್ದರೂ ಹಾಸ್ಯದ ಆ್ಯಟ್ರಾಕ್ಷನ್ ಎಂಬುದು ಮನದಟ್ಟಾಗಿರು ವುದರಿಂದ ಸುಪರ್ ಮರ್ಮಯೆ ಎಂಬ ಹೆಸರಿನಲ್ಲಿ ಪುಲ್ ಕಾಮಿಡಿ ಚಿತ್ರವನ್ನು ಸಿದ್ದಪಡಿಸಿದ್ದೇನೆ ಎಂದು ಹೇಳುತ್ತಾರೆ ರಾಮ್ ಶೆಟ್ಟಿ.

ಬ್ಯಾಂಕ್ ಮನೇಜರ್ನ ಮಗಳನ್ನು ಪ್ರೇಮ ವಿವಾಹವಾಗಿರುವ ರಿಕ್ಷಾಡ್ರೈವರ್ ತನ್ನ ಹೆಂಡತಿಯನ್ನು ಪಡೆಯಲು ನಡೆಸುವ ಕಸರತ್ತೇ ಚಿತ್ರದ ಕಥಾವಸ್ತು. ಮಾವನಿಗೆ ಬೇಡವಾದ ಅಳಿಯನಾಗಿ ಪಂಚರಂಗಿ ಪೊಂ ಪೊಂ ಖ್ಯಾತಿಯ ಕಾಮಿಡಿ ಕಿಂಗ್ ರಾಘವೇಂದ್ರ ರೈ ನಟಿಸಿದ್ದಾರೆ. ಗಂಭೀರ ಪಾತ್ರಧಾರಿಯಾಗಿ ನಗಿಸುವ ವೈಶಿಷ್ಟ್ಯವನ್ನು ಮಾವನ ಪಾತ್ರಧಾರಿ ಗೋಪಿನಾಥ ಭಟ್ ಪ್ರದರ್ಶಿಸಿದ್ದಾರೆ. ಇವರಿಗೆ ಸಾಥ್ ನೀಡುತ್ತಿದ್ದಾರೆ ನವೀನ್ ಡಿ. ಪಡಿಲ್, ಭೋಜರಾಜ ವಾಮಂಜೂರು ಅರವಿಂದ ಬೋಳಾರ್. ಹೀಗಾಗಿ ಸಿನಿಮಾದರಲ್ಲಿ ಕಾಮಿಡಿಗೆ ಕೊರತೆ ಎನ್ನುವುದೇ ಇರುವುದಿಲ್ಲ. ಕುಡುಕ ಗಂಡನ ಕಿವಿ ಹಿಂಡಿ ಬದುಕು ರೂಪಿಸುವ ಬಜಾರಿ ಹೆಂಡತಿಯ ಪಾತ್ರಧಾರಿಯಾಗಿ ನಟಿಸುತ್ತಿರುವವರು ಶೃದ್ಧಾ ಸಾಲಿಯಾನ್. ಶೃದ್ಧಾ ಮೂಲತಃ ಮಣಿಪಾಲದವರಾದರೂ ಹುಟ್ಟಿ ಬೆಳೆದದ್ದು ಮುಂಬೈಯಲ್ಲಿ ಸಬ್ ಟಿವಿಯಲ್ಲಿ ಬರುವ ಜಿನಿ ಔರ್ ಜುಜು ಧಾರಾವಾಹಿಯ ಪ್ರಮುಖ ಪಾತ್ರಧಾರಿ. ಹಲವಾರು ಹಿಂದಿ ಸಿರಿಯಲ್ ಹಾಗೂ ಹಿಂದಿ ಚಲನಚಿತ್ರಗಳಲ್ಲಿ ನಟಿಸಿರುವ ಅನುಭವಿ ಶೃದ್ಧಾರಿಗೆ ಇದು ಮೊದಲ ತುಳು ಸಿನಿಮಾ. ಒಂತೆ ತುಳು ಗೊತ್ತಾಪುಂಡು ಎನ್ನುವಷ್ಟೆ ತುಳು ತಿಳಿದವರು. ಕನ್ನಡ ಗೊತ್ತೇ ಇಲ್ಲ. ಇವರದು ಎರಡನೆ ನಾಯಕಿಯ ಪಾತ್ರ.
ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವವರು ಚಾಲಿಪೋಲಿಲು ಚಿತ್ರದ ನಾಯಕಿ ದಿವ್ಯಶ್ರೀ ಭಟ್. ಚಾಲಿಪೊಲೀಲು ಒಂದೇ ಚಿತ್ರದ ಮೂಲಕ ತುಳುನಾಡಿನ ಮನೆ ಮಾತಾಗಿರುವ ದಿವ್ಯಶ್ರೀ ಹಲವು ಆಫ್ರ್ಗಳು ಬರುತ್ತಿವೆ. ತಾಯಿಯ ಪಾತ್ರದಲ್ಲಿ ಗಮನ ಸೆಳೆಯಲಿದ್ದಾರೆ ಶೋಭಾ ರೈ. ಬಂಗಾರದ ಕುರಲ್ನ ನಾಯಕ ಶಿವಧ್ವಜ್ರದ್ದು ಅತಿಥಿ ಪಾತ್ರ. ಮೇ ತಿಂಗಳಲ್ಲಿ ಸುಪರ್ ಮಮರ್ಾಯೆ ಚಿತ್ರ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ. ನಾನು ಸ್ಟಂಟ್ ಮಾಸ್ಟರ್ ಆಗಿದ್ದರೂ ಈ ಚಿತ್ರದಲ್ಲಿ ಸ್ಟಂಟ್ ಮಾಡಿಲ್ಲ ಎನ್ನುತ್ತಾರೆ ರಾಮ್ ಶೆಟ್ಟಿ.
ರಾಮ್ ಶೆಟ್ಟರಿಗೆ ಬಾಲಿವುಡ್ನಲ್ಲಿ ಸಾಥ್ ನೀಡುತ್ತಿದ್ದ ಕ್ಯಾಮರಾಮನ್ ಈಜನ್ ಸುಪರ್ ಮರ್ಮಯೇ ಸುಪರ್ ಮಾಡಲು ಕೈ ಜೋಡಿಸಿದ್ದಾರೆ. ರಾಮ್ ಶೆಟ್ಟರು ಕಳೆದ ಎರಡು ವರ್ಷಗಳಿಂದ ಶೃದ್ಧೆಯಿಂದ ಸಿದ್ದಪಡಿಸಿದ ಸ್ಕ್ರಿಪ್ಟ್ಗೆ ಮಾತಿನ ರೂಪ ಕೊಟ್ಟವರು ಖ್ಯಾತ ನಾಟಕ ರಚನಕಾರ ನವೀನ್ ಶೆಟ್ಟಿ ಅಳಕೆ. ಕಡಲ ಮಗೆ ಖ್ಯಾತಿಯ ಚಂದ್ರಕಾಂತ್ ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಿರಾಜ್ ಕಾವೂರು ಸಾಹಿತ್ಯದ ಐದು ಹಾಡುಗಳು ಚಿತ್ರದಲ್ಲಿವೆ. ಸಚಿನ್ ಶೆಟ್ಟಿ ಸಹ ನಿರ್ದೇ ಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಕಲೇಶಪುರದ ಸಹಜ ಪರಿಸರದಲ್ಲಿ ಈಗಾಗಲೇ ಎರಡು ಹಾಡುಗಳ ಚಿತ್ರಿಕರಣವಾಗಿವೆ. ತಮ್ಮ ಲಕ್ಷ್ಮಣ್ ಕಲಾ ನಿರ್ದೇಶಕರಾಗಿ ಚಿತ್ರದ ಅಂದ ಹೆಚ್ಚಿಸಿದ್ದಾರೆ. ಕರ್ನುರ್ ಮೋಹನ್ ರೈ, ಆ್ಯಗ್ನೆಲ್ ರಾಡ್ರಿಗಸ್, ಪ್ರದೀಪ್ ಆಳ್ವಾ, ಸತೀಶ್ ಬಂದಲೆ, ದೀಪಕ್ ರೈ ಪಾಣಾಜೆ ಮೊದಲಾದವರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಈವರೆಗಿನ ಮೂರು ತುಳು ಚಿತ್ರಗಳನ್ನು ರಾಮ್ ಶೆಟ್ಟರೇ ನಿರ್ಮಿಸಿ ನಿರ್ದೇಶಿಸಿದ್ದರು. ಈ ಬಾರಿಯ ಅವರ ನಿರ್ದೇಶನದ ಚಿತ್ರಕ್ಕೆ ಅಡ್ಯಾರು ಮಾಧವ್ ನಾಯ್ಕ ನಿರ್ಮಾಪಕರಾಗಿದ್ದಾರೆ. ದೀಪಕ್ ಶೆಟ್ಟಿ ಕುದ್ರಾಡಿ, ಜಗದೀಶ್ ಶೆಟ್ಟಿ ಸರ್ವಾಣಿ, ಪುರುಷೋತ್ತಮ ಭಂಡಾರಿ ಅಡ್ಯಾರ್ ಈ ಸಿನಿಮಾಕ್ಕಾಗಿ ದುಡಿದಿದ್ದಾರೆ



