ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಭರ್ಜರಿ ಮುನ್ನಡೆ ಸಾಧಿಸಿದೆ ಆಮ್ ಆದ್ಮಿ ಪಕ್ಷ, ಇದು ದೆಹಲಿ ಜನತೆಯ ಗೆಲುವು, ಈ ಅಭೂತಪೂರ್ವ ಗೆಲುವು ನೀಡಿದ ದೆಹಲಿ ಜನತೆಗೆ ವಂದನೆ, ಅಭಿನಂದನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.
ಆಪ್ ಕಚೇರಿಯ ಬಳಿ ವಿಜಯೋತ್ಸವ ಆಚರಿಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಇದು ಸತ್ಯಕ್ಕೆ ದೊರಕಿದ ಅಭೂತಪೂರ್ವ ಗೆಲುವು. ಈ ಗೆಲುವಿನಿಂದಾಗಿ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ ಮತ್ತು ಭಯವೂ ಆಗುತ್ತಿದೆ ಎಂದು ಹೇಳಿದರು.