ಶಿವಮೊಗ್ಗ: ಶಿವಮೊಗ್ಗದಲ್ಲಿ ಗುರುವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಮೆರವಣಿಗೆಯ ನಂತರ ನಡೆದ ಘರ್ಷಣೆಯಲ್ಲಿ ಶಿವಮೊಗ್ಗಾದ ಅಲ್ಕೋಳ ನಿವಾಸಿ ವಿಶ್ವನಾಥ್(35) ಎಂಬವರು ಕೊಲೆಗೀಡಾಗಿದ್ದರು. ಜೊತೆಗೆ ಇನ್ನೂ 7 ಮಂದಿ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಆದರೆ ಆರೋಪಿಗಳ ಗುಟ್ಟನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ. ಆರೆಸ್ಸೆಸ್ ವಿರುದ್ಧ ಹಾಗೂ ಪಾಕಿಸ್ತಾನದ ಪರವಾಗಿ ಪಿಎಫ್ಐ ಕಾರ್ಯಕರ್ತರು ಘೋಷಣೆ ಕೂಗಿದ್ದೇ ಈ ಘಟನೆಗೆ ಕಾರಣವೆನ್ನಲಾಗಿದೆ.
ಮೃತನ ಕುಟುಂಬಕ್ಕೆ ಶಿಕ್ಷಣ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕ್ ತಿಳಿಸಿದ್ದಾರೆ. ಫೆ.25ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನೆಯಿಂದ ಶಿವಮೊಗ್ಗ ಸ್ತಭ್ದವಾಗಿದ್ದು, ಅಂಗಡಿ ಮುಂಗಟ್ಟು, ಶಾಲಾ ಕಾಲೇಜ್ಗಳು ಮುಚ್ಚಿದ್ದವು.
