ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.12ರಿಂದ ಮಾ. 18 ರವರೆಗೆ ನಡೆಯಲಿದೆ. ಎಲ್ಲ ದಿನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆ, ಉಪನ್ಯಾಸಗಳು ನಡೆಯಲಿವೆ.

12ರಂದು ಬೆಳಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು ರಾತ್ರಿ 8 ಗಂಟೆಗೆ ಪ್ರಾರ್ಥನೆ, ಕುಂಡಸಂಸ್ಕಾರಾದಿ ಕ್ರಿಯೆ ನಡೆಯಲಿದೆ. ಬೆಳಗ್ಗೆ 6.45ಕ್ಕೆ ಅಮತವರ್ಷಿಣಿ ಸಭಾಭವನದಲ್ಲಿ ಸಾಮೂಹಿಕ ಶಿವಸಹಸ್ರನಾಮಾವಳಿ ಪಠನ ನಡೆಯಲಿದ್ದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10.30ಕ್ಕೆ ಪಲ್ಲಪೂಜೆ, ಅನ್ನಸಂತರ್ಪಣೆ ಮೂಹೂರ್ತ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ. ರಾಜೇಂದ್ರ ಕುಮಾರ್, ಡಾ. ನೀತಾ ರಾಜೇಂದ್ರ ಕುಮಾರ್ ಭಾಗವಹಿಸುವರು.

ಸಂಜೆ ಗಂಟೆ 4.30ಕ್ಕೆ ರಾಜ್ಯ ನಗರಾಭಿವದ್ಧಿ ಸಚಿವ ವಿನಯ ಕುಮಾರ್ ಸೊರಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಅಷ್ಟಬಂಧ ಬ್ರಹ್ಮಕಲಶದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಬಳಿಕ ಸಂಜೆ ಗಂಟೆ 6.30ಕ್ಕೆ ಕಾರ್ಕಳ ಶ್ರೀ ವೆಂಕಟ್ರಮಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, 8.30ಕ್ಕೆ ಕಲ್ಲಡ್ಕ ವಿಠಲ ನಾಯ್ಕ ಮತ್ತು ಬಳಗದವರಿಂದ ವಿನೂತನ ಶೈಲಿಯ ಗೀತ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

ಮಾ.13ರ ಬೆಳಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ಗಂಟೆ 8ರಿಂದ ಗಣಹೋಮ, ರುದ್ರಯಾಗ ನಡೆಯಲಿದೆ. ರಾತ್ರಿ ಅಂಕುರಾರೋಪಣ, ಸ್ಥಳ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ಪೂಜೆ, ಬಲಿ ನಡೆಯಲಿದೆ. ಬೆಳಗ್ಗೆ 6.45ಕ್ಕೆ ಅಮತವರ್ಷಿಣಿ ಸಭಾಭವನದಲ್ಲಿ ಸಾಮೂಹಿಕ ಶಿವಸಹಸ್ರನಾಮಾವಳಿ ಪಠಣ ಇರಲಿದೆ. ಸಂಜೆ ಗಂಟೆ 6.30ರಿಂದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಂದ ದಾಸವಾಣಿ, ಬಳಿಕ 8.30ರಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ನತ್ಯ ವೈಭವ ನಡೆಯಲಿದೆ.

ಮಾ. 14ರಂದು ಸಂಜೆ 6ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ನ ರಜತ ಮಹೋತ್ಸವ ಉದ್ಘಾಟನೆ ಸಮಾರಂಭ, 15ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಸಿದ್ಧ ‘ಚತುರ್ವಿಧ ದಾನ ಪರಂಪರೆ’ ಅವಲೋಕನ ಮತ್ತು ಉಚಿತ ಆರೋಗ್ಯ ಶಿಬಿರದ ಉದ್ಘಾಟನೆ ಡಾ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

By suddi9

Leave a Reply

Your email address will not be published. Required fields are marked *