ಮೂಡುಬಿದರೆ: ದೇಶದ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೃಹತ್ ಅಭಿನಂದನಾ ಏ.12ರಂದು ಮೂಡುಬಿದರೆ ವಿದ್ಯಾಗಿರಿಯ ಆಳ್ವಾಸ್ ಪ್ಯಾಲೇಸ್ ಗ್ರೌಂಡ್ ನಲ್ಲಿ ಸಂಜೆ 5.30ಕ್ಕೆ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಡಾ.ಎನ್. ವಿನಯ ಹೆಗ್ಡೆ, ಕಾರ್ಯಧ್ಯಕ್ಷ ಡಾ.ಎಮ್.ಎನ್. ರಾಜೇಂದ್ರಕುಮಾರ್ ಹಾಗೂ ಸಂಚಾಲಕ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

