ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕರ್ನಾಟಕ ಮಾಧ್ಯಮ ಅಕಾಡಮಿ ಬೆಂಗಳೂರು, ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ, ಕರ್ನಾ ಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮುಂಬಯಿ ಥಾಣೆಯ ಹೋಟೇಲ್ ಧೀರಜ್ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ 2015 ಕಾರ್ಯಕ್ರಮದ ರುವಾರಿ ರೋನ್ಸ್ ಬಂಟ್ವಾಳ್ ದಂಪತಿಯನ್ನು ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

