ಬಂಟ್ವಾಳ : ಅರಣ್ಯ ಇಲಾಖೆ ಬಂಟ್ವಾಳ ವಲಯದ 2014-15ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಮತ್ತು ಗಿರಿಜನ ಉಪಯೋಜನೆಯಡಿ ಫಲಾನುಭವಿಗಳಿಗೆ ಸೌರ ವಿದ್ಯುತ್ ದೀಪ ಮತ್ತು ಸೂರ್ಯನ ತಾಪದಿಂದ ನೀರು ಬಿಸಿ ಮಾಡುವ ಯಂತ್ರವನ್ನು ಅರಣ್ಯ ,ಪರಿಸರ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಚಿವರ ಕಛೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ , ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ , ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ , ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್ , ಉಪವಲಯ ಅರಣ್ಯಾಧಿಕಾರಿ ಎಚ್.ಬಿ.ರಮೇಶ್ , ಅರಣ್ಯ ರಕ್ಷಕರಾದ ವಿನಯ ಕುಮಾರ್ , ಭಾಸ್ಕರ ಹಾಗೂ ಸಚಿವರ ಆಪ್ತ ಸಹಾಯಕ ಚಂದ್ರಶೇಖರ ಪಾತೂರ್ ಉಪಸ್ಥಿತರಿದ್ದರು.

