ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶತಮಾನ ಪೂರೈಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಹಾಗೂ ಶೇ. ನೂರು ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಗಳನ್ನು ಅಭಿನಂದನಾ ಕಾರ್ಯಕ್ರಮ ಇಂದು ನಗರದಲ್ಲಿ ನಡೆಯಿತು.
ಕೊಟ್ಟಾರದ ನೇತ್ರಾವತಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ಮೆರೆದ ಹಲವು ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಉಪಸ್ಥಿತರಿದ್ದು, ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಶತಮಾನ ಪೂರೈಸಿದ ಅಂಗವಾಗಿ ಇಂಥಾ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ವೇದಿಕೆಯಲ್ಲಿ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.


