ಸುದ್ದಿ9: ಕಿನ್ನಿಗೋಳಿ ಶಕ್ತಿ ಕೇಂದ್ರದ ವತಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಮೂಲ್ಕಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಕಿನ್ನಿಗೋಳಿಯ ಯುಗಪುರುಷದಿಂದ ಬಸ್ಸು ನಿಲ್ದಾಣದ ವರೆಗೆ ಪಾದಯಾತ್ರೆ ನಡೆಯಿತು. ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ಉಮಾನಾಥ ಕೋಟ್ಯಾನ್, ಜಗದೀಶ್ ಅಧಿಕಾರಿ, ಭುವನಾಭಿರಾಮ ಉಡುಪ, ಸುಚರಿತ ಶೆಟ್ಟಿ, ಕಸ್ತೂರಿ ಪಂಜ, ಆಶಾ ರತ್ನಾಕರ ಸುವರ್ಣ, ವಜ್ರಾಕ್ಷಿ ಶೆಟ್ಟಿ, ಬೇಬಿ ಸುಂದರ ಕೋಟ್ಯಾನ್, ಈಶ್ವರ್ ಕಟೀಲ್, ಆಶಾ ರತ್ನಾಕರ ಸುವರ್ಣ, ದೇವಪ್ರಸಾದ್ ಪುನರೂರು, ಜನಾರ್ಧನ ಕಿಲೆಂಜೂರು, ಆದರ್ಶ್ ಶೆಟ್ಟಿ ಎಕ್ಕಾರು, ನಾಮದೇವ ಕಾಮತ್, ದೇವಿಪ್ರಸಾದ್ ಶೆಟ್ಟಿ, ಪ್ರತೀಕ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

