ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟ-2015 ರಲ್ಲಿ ಭಾಗವಹಿಸಿದ್ದ ಪುತ್ತೂರು ಕೊಂಬೆಟ್ಟು ಪದವಿಪೂರ್ವ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿ ಕು.ಹಿಮಾ ಎಚ್.ಬಿ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ ಭಾರತೀಯ ನೃತ್ಯಕಲಾ ಶಾಲೆಯಲ್ಲಿ ಭರತನಾಟ್ಯದಲ್ಲಿ ವಿದ್ವತ್ ಪೂರ್ವ ಶಿಕ್ಷಣ, ಗಾನಸಿರಿ ಕಲಾ ಕೇಂದ್ರದಲ್ಲಿ ಸುಗಮಸಂಗೀತವನ್ನು ಹಾಗೂ ವಿದುಷಿ ಪವಿತ್ರ ರೂಪೇಶ್ ರಲ್ಲಿ ಕರ್ನಾಟಕ ಸಂಗೀತವನ್ನು ಕಲಿಯುತ್ತಿರುವ ಹಿಮಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಪಶು ಸಂಗೋಪನಾ ಇಲಾಖೆಯ ಜಾನುವಾರು ಅಧಿಕಾರಿ ಹೊನ್ನಪ್ಪ ಬಿ.ಗೌಡ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಮಂಜುಳ ಎಚ್.ಗೌಡ ದಂಪತಿಯ ಪುತ್ರಿ
