ಡಾ.ಎನ್.ನಾರಾಯಣ ಶೆಟ್ಟಿ ಶಿಮಂತೂರುರವರಿಗೆ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ವಿಜಯಾ ಬ್ಯಾಂಕ್ನ ಸಂಸ್ಥಾಪಕ ,ಬಂಟ ಸಮಾಜದಲ್ಲಿ ಶ್ರೇಷ್ಠ ಸ್ಥಾನ ಮಾನಗಳನ್ನು ಹೊಂದಿದ್ದ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರಿನಲ್ಲಿ ಮುಲ್ಕಿ ಬಂಟರ ಸಂಘ ಹಾಗೂ ಮುಲ್ಕಿ ಸುಂದರರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕೊಡ ಮಾಡುವ 2015ರ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಯಕ್ಷಗಾನ ಛಂದಸ್ಸಿನ ಕ್ಷೇತ್ರದಲ್ಲಿ ಅದ್ಬುತ ಸ್ಥಾನ ತೋರಿದ ನಿವೃತ್ತ ಶಿಕ್ಷಕ ಡಾ.ಎನ್.ನಾರಾಯಣ ಶೆಟ್ಟಿ ಶಿಮಂತೂರು ಆಯ್ಕೆಯಾಗಿದ್ದಾರೆ.

ಸೆಪ್ಟಂಬರ್ 27ರಂದು ಮೂಲ್ಕಿ ಕಾರ್ನಾಡಿನ ಬಂಟರ ಸಂಘದಲ್ಲಿ ನಡೆಯುವ ಮುಲ್ಕಿ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಮುಲ್ಕಿ ಬಂಟರ ಸಂಘದ ಆಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ
