ಬಂಟ್ವಾಳ: ಸಜೀಪ ಮೂಡ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನವು 1 ಕೋಟಿ ರೂ. ವೆಚ್ಚದಲ್ಲಿ ಜೀರ್ಣೊದ್ಧಾರ ಅಂಗವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೆಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು. ಸರಕಾರದಿಂದ ಗರಿಷ್ಠ ಸಹಾಯಧನ ಹಾಗೂ ಸಂಪರ್ಕಹ ರಸ್ತೆಗೆ ಡಾಮರೀಕರಣಗೊಳಿಸುವ ಭರವಸೆ ನೀಡಿದರು.

ಈ ಸಂದರ್ಭ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜೀರ್ಣೋದ್ದಾರ ಅಮಿತಿ ಅಧ್ಯಕ್ಷ ಬಿ.ಸದಾನಂದ ಪೂಂಜಾ, ಮಾಜಿ ಗ್ರಾ.ಪಂ. ಅಧ್ಯಕ್ಷ ಶೋಭಿತ್ ಪೂಂಜಾ, ಸಮಿತಿ ಪದಾಧಿಕಾರಿಗಳಾದ ಎಂ. ಸುಬ್ರಹ್ಮಣ್ಯ ಭಟ್, ಕೆ.ಸದಾನಂದ ಶೆಟ್ಟಿ,ಜಯಶಂಕರ, ಮಾರಪ್ಪ ಕೊಟ್ಟಾರಿ, ಶ್ರೀನಾಥ ಶೆಟ್ಟಿ, ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.
