ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಕರ್ಬೆಟ್ಟು ನಿವಾಸಿ ಲಕ್ಷ್ಮಣ ಸಪಲ್ಯ(55) ಇವರು ಹೃದಯಾಘಾತದಿಂದ ವಿಟ್ಲ ಸಮೀಪದ ಕುಡ್ತಮುಗೇರು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರಿಗೆ ತಾಯಿ ಸಹಿತ ಪತ್ನಿ, ನಾಲ್ವರು ಪುತ್ರರು ಮತ್ತು ಪುತ್ರಿ ಇದ್ದಾರೆ. ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದ ಇವರು ಕುಡ್ತಮುಗೇರು ತಾಯಿ ಮನೆಗೆ ಹೋಗಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದು, ಮೃತರ ಅಂತ್ಯಕ್ರಿಯೆ ಪಾಣೆಮಂಗಳೂರಿನಲ್ಲಿ ಸೋಮವಾರ ರಾತ್ರಿ ನಡೆಯಿತು.
