ವಿಟ್ಲ : ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯ ಸಭಾಂಗಣದಲ್ಲಿ ಭಾರತ ಆಹಾರ ಮಂಡಳಿ ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯೆ ಉಷಾ.ಕೆ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟಣೆಯನ್ನು ತಾಲೂಕು ಪಂಚಾಯತ್ ಸದಸ್ಯೆ ಜುಲಿಯಾನ ಮೇರಿ ಲೋಬೋ ನೆರವೇರಿಸಿದರು.ಕಾರ್ಯಕ್ರಮದಲ್ಲಿ ವಿಟ್ಲಶಿಶು ಅಭಿವೃಧ್ಧಿ ಯೋಜನಾಧಿಕಾರಿ ಸುಧಾ ಜೋಶಿ , ಸಂಪನ್ಮೂಲವ್ಯಕ್ತಿಗಳಾದ ಚಂದ್ರಾವತಿ ಕಿರಿಯ ಆರೋಗ್ಯ ಸಹಾಯಕಿ ಮತ್ತು ದರ್ಶನ್ ತ್ರಿಪಾಟಿ ಭಾರತ ಆಹಾರ ಮಂಡಳಿ ಮಂಗಳೂರು ಮೇಲ್ವಿಚಾರಕಿ ರೋಹಿಣಿ ಮತ್ತು ಮೇಲ್ವಿಚಾರಕಿ ಲೋಲಾಕ್ಷಿ ಉಪಸ್ಥಿತರಿದ್ದರು
