ಮೂಡುಬಿದರೆ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸನ್ನದರಾಗಿರುವ ವಿದ್ಯಾರ್ಥಿಗಳಿಗೆ ಸಮರ್ಪಕ ಮಾರ್ಗದರ್ಶನ ಮಾಡಲು ಸಿಲೆಬಸ್, ಶಿಕ್ಷಕರ ಬೋಧನೆ ಗುಣಮಟ್ಟ ಹೆಚ್ಚಿಸಿ ಶಿಕ್ಷಣ ಮೇಲ್ದರ್ಜೆಗೇರುವುದು ಅನಿವಾರ್ಯ. ಇಲ್ಲವಾದಲ್ಲಿ ಟ್ಯೂಶನ್ ದಂಧೆಗಳು ವ್ಯಾಪಕವಾಗಿ ಹರಡಿ ಇಡೀ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಶಿಕ್ಷಕರಿಂದ ಉತ್ತಮ ಬೋಧನೆಯನ್ನು ನಿರೀಕ್ಷೆ ಮಾಡುತ್ತಾರೆ. ಶಿಕ್ಷಕರು ತಮ್ಮ ಕ್ಷೇತ್ರದ ಬದಲಾವಣೆಯನ್ನು ಅರಿತು, ಅದಕ್ಕೆ ಪೂರಕವಾದ ಜ್ಞಾನವನ್ನು ಸಂಪಾದಿಸಿ ಬೋಧನೆ ಮಾಡುವಂತಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿಪ್ರಾಯಪಟ್ಟರು.
ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಸಭಾಂಗಣದಲ್ಲಿ 4 ದಿನಗಳ ಕಾಲ ನಡೆಯುವ ಮೈಸೂರು ವಿಭಾಗದ ಪ.ಪೂ ಕಾಲೇಜುಗಳ ಭೌತಶಾಸ್ತ್ರ ಉಪನ್ಯಾಸಕರ ತರಬೇತಿ ಕಾರ್ಯಾ ಗಾರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

mbd_nov4_1
ಶಿಕ್ಷಣ ಇಲಾಖೆ ಜಡ್ಡು ಹಿಡಿಯಬಾರದು. ಸಿಇಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವಲ್ಲೂ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಕಾಟಚಾರಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ಬೇಕಾದ ಶೈಕ್ಷಣಿಕ ವಾತಾವರಣಗಳನ್ನು ಕಲ್ಪಿಸುವಲ್ಲಿ ಪ್ರಯತ್ನ ಮಾಡಬೇಕು. ಪ್ರಶ್ನೆ ಪತ್ರಿಕೆಗಳಲ್ಲಿನ ತಪ್ಪುಗಳಾಗುವುದು ಇಲಾಖೆಯ ಬೇಜವಾಬ್ದಾರಿತನ. ಶಿಕ್ಷಣ ಇಲಾಖೆಯ ತೀರ್ಮಾ ನಗಳು ಕಚೇರಿಯಲ್ಲಿ ಚರ್ಚೆಯಾಗಿ ತೀರ್ಮಾನವಾಗಬಾರದು. ಶಿಕ್ಷಣ ಕ್ಷೇತ್ರದ ತಜ್ಞರ ಜೊತೆ ಸಮಾಲೋಚನೆ ನಡೆಸಿ ಪಾರದರ್ಶಕ ನೀತಿನಿಯಮಗಳನ್ನು ರೂಪಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಆಳ್ವಾಸ್ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಎಚ್.ರಮೇಶ್ ಶೆಟ್ಟಿ ಸ್ವಾಗತಿಸಿದರು. ರಾಜ್ಯ ಕಾರ್ಯಕ್ರಮ ಸಂಯೋಜಕ ನಾರಾಯಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದಯ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ವಿಭಾಗೀಯ ಕಾರ್ಯಕ್ರಮ ಸಂಯೋಜಕ ಆನಂದ ವಂದಿಸಿದರು.

ಶಿಕ್ಷಣ ಇಲಾಖೆ ಜಡ್ಡು ಹಿಡಿಯಬಾರದು. ಸಿಇಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವಲ್ಲೂ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಕಾಟಚಾರಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡುವುದಿಲ್ಲ. ಶಿಕ್ಷಣ ಇಲಾಖೆಯ ತೀರ್ಮಾನವೇ ಅಂತಿಮವಾಗಬಾರದು. ಶಿಕ್ಷಣ ಕ್ಷೇತ್ರದ ತಜ್ಞರ ಜೊತೆ ಸಮಾಲೋಚನೆ ನಡೆಸಿ ಪಾರದರ್ಶಕ ನೀತಿನಿಯಮಗಳನ್ನು ರೂಪಿಸುವಂತಾಗಬೇಕು.
-ಡಾ.ಎಂ.ಮೋಹನ್ ಆಳ್ವ
ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

By suddi9

Leave a Reply

Your email address will not be published. Required fields are marked *