ವಿಟ್ಲ: ವಿಠಲ ವಿದ್ಯಾ ಸಂಘದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾ ಕೂಟವನ್ನು ಸಂಸ್ಥೆಯ ಹಳೆವಿದ್ಯಾರ್ಥಿನಿ ಪ್ರಸ್ತುತ ಈಜು ತರಬೇತುದಾರರಾದ ವಿಜಯಲಕ್ಷ್ಮಿ ಅರುಣ್ ವಿಟ್ಲ ಇವರು ಉದ್ಘಾಟಿಸಿದರು. ಶಾಲಾ ನಾಯಕ ಯೋಗೀಶ್ ಕ್ರೀಡಾಪಟುಗಳಿಗೆ ಪ್ರಮಾನ ವಚನ ಬೋಧಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ನಿತ್ಯಾನಂದ ನಾಯಕ್ ವಹಿಸಿದ್ದರು. ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ವಂದಿಸಿದರು. ವಿಠಲ ಸುಪ್ರಜಿತ್ ಐಟಿಐ ಪ್ರಾಂಶುಪಾಲ ರಘುರಾಮ ಶಾಸ್ತ್ರಿ,ಕಾಲೇಜು ಉಪನ್ಯಾಸಕರು, ಪ್ರೌಢ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.
