ಬಂಟ್ವಾಳ:ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳಪದವು ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನ.25 ರಂದು ಜರಗಿತು.
ದ.ಕ.ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಅರಳ ಗ್ರಾ.ಪಂ.ಅಧ್ಯಕ್ಷೆ ತುಂಗಮ್ಮ ಅವರು ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾ.ಪಂ. ಸದಸ್ಯೆ ಎಫ್ರೆಮ್ ಸಿಕ್ವೇರಾ, ಅರಳ ಗ್ರಾ.ಪಂ.ಉಪಾಧ್ಯಕ್ಷ ಜಗದೀಶ್ ಆಳ್ವ, ಸೊನರ್ಾಡು ಕೆನರಾ ಬ್ಯಾಂಕ್ ಪ್ರಬಂಧಕ ರಮೇಶ್ ನಾಯಕ್,ಅರಳ ಗ್ರಾ.ಪಂ.ಸದಸ್ಯರಾದ ದುಲೈಕ,ಜೈನಾಬ್, ಶಿಕ್ಷಣ ಸಂಯೋಜಕಿ ಸುಜಾತ ,ಎಸ್ಡಿಎಮ್ಸಿ ಸದಸ್ಯರು, ಶಿಕ್ಷಕರು,ಪೋಷಕರು,ಹಳೆ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
