ಕೈಕಂಬ : ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಪ್ರೇರಣಾ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟ ಕೈಕಂಬ, ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಿಂದ ಕುಪ್ಪೆಪದವಿನ ಆಶಾಕಿರಣ ಚರ್ಚ್ಹಾಲ್ನಲ್ಲಿ ಉಚಿತ ವೈದ್ಯಕೀಯ ಶಿಬಿರ ಇತ್ತೀಚೆಗೆ ನಡೆಯಿತು.

ಶಿಬಿರದಲ್ಲಿ ಸಾಮಾನ್ಯ ರೋಗ ತಪಾಸಣೆ, ಕಣ್ಣು, ಕಿವಿ, ಮೂಗು ಮತ್ತು ಗಂಟಲು, ಎಲುಬು, ಸ್ತ್ರೀರೋಗ, ಮಕ್ಕಳ ತಜ್ಞರು ಆಗಮಿಸಿ ತಪಾಸಣೆ ನಡೆಸಿ ಸೂಕ್ತ ವೈದ್ಯಕೀಯ ಉಪಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಗತ್ಯವಿರುವ ಫಲನುಭಾವಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಔಷಧಿ ವಿತರಿಸಲಾಯಿತು. ಕುಪ್ಪೆಪದವು ಆಸುಪಾಸಿನ ಜನರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಹಸಿರು ಕಾರ್ಡ್ ನೀಡಲಾಯಿತು.
