ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2015 ನೇ ಸಾಲಿನಲ್ಲಿ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತದ ಜೂನಿಯರ್ ಪರೀಕ್ಷೆಯಲ್ಲಿ ಅಯನಾ ವಿ.ರಮಣ್ ಶೇ.92.75 ಅಂಕಗಳೊಂದಿಗೆ ಅತ್ಯುನ್ನತ ಉತ್ತೀರ್ಣರಾಗಿದ್ದಾರೆ.
ಹಿರಿಯ ಸಂಗೀತ ವಿದ್ವಾಂಸ ಎಂ.ನಾರಾಯಣ್ ಶಿಷ್ಯೆಯಾಗಿರುವ ಈಕೆ, ಮೂಡುಬಿದಿರೆಯ ಆಳ್ವಾಸ್ ಆಂಗ್ಲಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ.
26mood ayanaಪತ್ರಕರ್ತ, ಕಲಾವಿದ ಕೆ.ವಿ.ರಮಣ್ ಹಾಗೂ ಉಪನ್ಯಾಸಕಿ ಮುಕಾಂಬಿಕಾ.ಜಿ.ಎಸ್.ಪುತ್ರಿಯಾಗಿರುವ ಅಯನಾ ರಮಣ್ ಮನೆ ಮನೆಗೆ ಭರತನಾಟ್ಯ, ನಾಟ್ಯಾಯನದಂತಹ ನವೀನ ಪರಿಕಲ್ಪನೆಗಳ ಬಹುಮಖ ಪ್ರತಿಭೆಯ ಕಾರ್ಯಕ್ರಮಗಳ ಮೂಲಕ ಈಗಾಗಲೇ ಗಮನಸೆಳೆದಿದ್ದಾರೆ.
ಸನಾತನ ನಾಟ್ಯಾಲಯದ ಶಾರದಾ ಮಣಿಶೇಖರ್ ಶಿಷ್ಯತ್ವದಲ್ಲಿ ಭರತನಾಟ್ಯದ ಸೀನಿಯರ್ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *