ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ವಾಮದಪದವು ಬಿಜೆಪಿ ವಲಯ ಸಮಿತಿ ವತಿಯಿಂದ ಬುಧವಾರ ಆರಂಭಗೊಂಡ ಚುನಾವಣಾ ಕಚೇರಿಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್ ಉದ್ಘಾಟಿಸಿದರು.
ಜಿಲ್ಲಾ ಪಂಚಾಯಿತಿ ಬಿಜೆಪಿ ಅಭ್ಯರ್ಥಿ ಎಂ.ತುಂಗಪ್ಪ ಬಂಗೇರ, ಬಿಜೆಪಿ ವಲಯ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕಾಪು, ತಾಲ್ಲೂಕು ಪಂಚಾಯಿತಿ ಅಭ್ಯರ್ಥಿ ಆಶಾ ಜಯರಾಮ ಶೆಟ್ಟಿ, ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮಂಗಿಲ, ವಿಜಯ ರೈ ಆಲದಪದವು, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ ಮತ್ತಿತರರು ಇದ್ದರು.
