ಬೆಂಗಳೂರು: ವಿಬ್ ಗಯಾರ್ ಶಾಲೆಗೆ ನುಗ್ಗಿದ್ದ ಚಿರತೆಗೆ ಅರವಳಿಕೆ ಮದ್ದನ್ನು ನೀಡಲಾಗಿದೆ  ಶಾಲೆಯ ಶೌಚಾಲಯದಲ್ಲಿ ಚಿರತೆ ಕುಸಿದು ಬಿದ್ದಿದ್ದು, ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಸಿದ್ಧತೆ ನಡೆಸುತ್ತಿದ್ದಾರೆ. ಭಾನುವಾರ ಮುಂಜಾನೆ  ಸುಮಾರಿಗೆ ಶಾಲೆಗೆ ನುಗ್ಗಿದ್ದ ಚಿರತೆಯನ್ನು ಹಿಡಿಯಲು ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
chirararate
ಚಿರತೆಗೆ ಅರವಳಿಕೆ ಮದ್ದು ನೀಡಲು ಹೋದ ಮೂವರ ಮೇಲೆ ಚಿರತೆ ದಾಳಿ ಮಾಡಿದೆ. ಭಾನುವಾರ ಮಧ್ಯಾಹ್ನ ಗೆ ವಿಬ್ ಗಯಾರ್ ಶಾಲೆಯಲ್ಲಿ ಚಿರತೆ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು.   ಈ ಸಮಯದಲ್ಲಿಯೇ ಚಿರತೆ ಶಾಲೆಯ ಕಾಪೌಂಡ್‌ ಮೇಲಿನಿಂದ ಹಾರಿ ಕೊಠಡಿಗೆ ನುಗ್ಗಿದೆ.  ಬೆಂಗಳೂರು ಉತ್ತರ ವಲಯದ ಅರಣ್ಯ ಸಂರಕ್ಷಣಾಧಿಕಾರಿಯವರ ನೇತೃತ್ವದಲ್ಲಿ  ಸಿಬ್ಬಂದಿಗಳು  ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಶಾಲೆಯ ಕಾಪೌಂಡ್ ಸಮೀಪ  ಜನರನ್ನು ನೋಡಿ ಗಾಬರಿಗೊಂಡ ಚಿರತೆ ಶಾಲೆಯ ಕೊಠಡಿಗೆ ನುಗ್ಗಿ  ಅವಿತು ಕೊಂಡಿದೆ.

ಮೂವರ ಮೇಲೆ ದಾಳಿ : ಕೊಠಡಿಯಿಂದ ಶೌಚಾಲಯಕ್ಕೆ ನುಗ್ಗಿದ್ದ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಈ ಸಮಯದಲ್ಲಿ ಅರವಳಿಕೆ ಮದ್ದು ನೀಡಲು ಬಂದ ಪಶುವೈದ್ಯರ ಮೇಲೆ ದಾಳಿ ಮಾಡಿ ಚಿರತೆ ಅಲ್ಲಿಂದ ತಪ್ಪಿಸಿಕೊಂಡಿದೆ. ಇಬ್ಬರು ಅಧಿಕಾರಿಗಳು, ಒಬ್ಬರು ಕ್ಯಾಮರಾಮನ್ ಸೇರಿ ಮೂವರ ಮೇಲೆ ಚಿರತೆ ದಾಳಿ ನಡೆಸಿದೆ.

By suddi9

Leave a Reply

Your email address will not be published. Required fields are marked *