ಮೂಡಬಿದರೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೂಡುಬಿದರೆ ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಜನಸಾಮನ್ಯರಿಗಾಗಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ನ್ಯಾಯಾಲಯ ಅಭಿಯಾನ ಕಾರ್ಯಕ್ರಮ ಸೋಮವಾರ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶ ಗಣೇಶ್ ಅಭಿಯಾನಕ್ಕೆ ಚಾಲನೆ ನೀಡಿದರು. ಮೂಡುಬಿದರೆ ನ್ಯಾಯಾದೀಶ ಎಸ್ಟಿ ಸತೀಶ್, ಮೂಡುಬಿದರೆ ವಕೀಲರ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್, ನಿಕಟಪೂರ್ವ ಅಧ್ಯಕ್ಷ ಕೆ.ಆರ್ ಪಂಡಿತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
