ಬಂಟ್ವಾಳ : ಸಣ್ಣ ನೀರಾವರಿ ಯೋಜನೆ ಇಲಾಖೆಯಿಂದ ರೂ.20ಲಕ್ಷ ಅನುದಾನದಲ್ಲಿ ಬಂಟ್ವಾಳ ಕಸ್ಬಾ ಗ್ರಾಮದ ಜಕ್ರಿಬೆಟ್ಟು-ಪುರ್ಲಾಯಿ ಎಂಬಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಅರಣ್ಯ ಪರಿಸರ ಜೀವಿಶಾಸ್ರ್ತ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭಾ ಸದಸ್ಯ ಬಿ.ಪ್ರವೀಣ್, ಪರಿಶಿಷ್ಟ ಜಾತಿ ಪಂಗಡದ ಅಧ್ಯಕ್ಷ ಜನಾರ್ಧನ್ ಚೆಂಡ್ತಿಮಾರ್, ಸಹಾಯಕ ಇಂಜಿನಿಯರ್ ಶಿವಪ್ರಸನ್ನ ಡಿ.ಎಂ., ಸಹಾಯಕ ಕಾಂiÀರ್iನಿರ್ವಾಹಕ ಇಂಜಿನಿಯರ್ ಷಣ್ಮುಗಂ, ಪ್ರಮುಖರಾದ ರಾಮಣ್ಣ, ಜಯಕರ, ಮನೋಹರ್ ನೇರಂಬೋಳು, ವಿನ್ಸೆಂಟ್ ಉಪಸ್ಥಿತರಿದ್ದರು.


