ಮಂಗಳೂರು: ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆಯಾದರೆ ಮಂಗಳೂರಿನಿಂದ ಕಟೀಲು ಕ್ಷೇತ್ರದವರೆಗೆ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಹರಕೆ ಹೊತ್ತಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಬ್ಬರು ಶುಕ್ರವಾರ ಪಾದಯಾತ್ರೆ ಕೈಗೊಳ್ಳುವ ಮೂಲಕ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ.
1222222222 copy
ಮಂಗಳೂರಿನ ಅವೀಕ್ಷಿತ್ ರೈ ಎಂಬವರೇ ಮೋದಿಗಾಗಿ ಪಾದಯಾತ್ರೆಯ ಹರಕೆ ಹೊತ್ತವರು. ಸಂಜೆ 4.20ರ ವೇಳೆಗೆ ಮಂಗಳೂರಿನ ಬಿಜೆಪಿ ಕಚೇರಿಯಿಂದ ಸುಮಾರು 25 ಕಿ.ಮೀ.ದೂರದ ಕಟೀಲಿಗೆ ಪಾದಯಾತ್ರೆ ಹೊರಟಿದ್ದಾರೆ. ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪ್ರತಾಪ್ ಸಿಂಹ ನಾಯಕ್ ಶಾಲು ಹಾಕಿ ಶುಭ ಹಾರೈಸಿದರು. ಅವೀಕ್ಷಿತ್ ಅವರನ್ನು ಬೀಳ್ಕೊಡುವ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಮುಖರಾದ ಸಂಜೀವ ಮಠಂದೂರು, ಶೈಲಜಾ ಭಟ್, ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೋದಿಯವರು ಪ್ರಧಾನಿಯಾಗಬೇಕೆಂಬುದು ನನ್ನ ಕನಸಾಗಿತ್ತು. ಅದೀಗ ನೆರವೇರಿದೆ. ಈ ಖುಷಿಯಿಂದಲೇ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ ಕೈಗೊಂಡಿದ್ದೇನೆ ಎಂದು ಅವೀಕ್ಷಿತ್ ತಿಳಿಸಿದರು.

By suddi9

Leave a Reply

Your email address will not be published. Required fields are marked *