ಮುಂಬಯಿ (ಉಳ್ಳಾಲ), ಮೇ.17: ಉಮ್ರಾ ಯಾತ್ರೆಗೆ ತೆರಳಿ ವಾಪಸ್ಸಾಗುತ್ತಿದ್ದ ಮೊಂಟೆಪದವು ಮೂಲದ ತಾಯಿ ಹಾಗೂ ಮಗ ಝುಬೈಲ್ ನ ಖಸೀಂ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಅದೇ ಕಾರಿನಲ್ಲಿದ್ದ ಮೃತ ಯುವಕನ ತಂದೆ ಹಾಗೂ ಪತ್ನಿ ಗಾಯಗೊಂಡು ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

16ullal10

16ullal11

ಮೊಂಟೆಪದವು ನಿವಾಸಿ ಅಬ್ಬಾಸ್ (29) ಹಾಗೂ ಅವರ ತಾಯಿ ಖತೀಜಮ್ಮ (50) ಮೃತಪಟ್ಟವರು. ಅದೇ ಕಾರಿನಲ್ಲಿದ್ದ ತಂದೆ ಮಹಮ್ಮದ್(60) ಹಾಗೂ ಪತ್ನಿ ಮೈನಾಝ್ (20) ಗಾಯಗೊಂಡು ಖಸೀಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೌದಿ ಅರೆಬಿಯಾದ ಝುಬೈಲ್ ನಲ್ಲಿ ಕನ್ ಸ್ಟ್ರಕ್ಷನ್ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ಬಾಸ್ ಅವರು ಕಳೆದ 15 ದಿನಗಳ ಹಿಂದೆ ಪತ್ನಿ ಹಾಗೂ ಹೆತ್ತವರನ್ನು ಉಮ್ರಾ ಯಾತ್ರೆಗೆ ತೆರಳಲು ಅಲ್ಲಿಗೆ ಕರೆಯಿಸಿದ್ದರು. ಅಲ್ಲಿಂದ ಉಮ್ರಾ ಯಾತ್ರೆಗೆ ಕೇರಳ ಮೂಲದ ಸ್ನೇಹಿತನ ಕುಟುಂಬದ ನಾಲ್ಕು ಮಂದಿ ಹಾಗೂ ಅಬ್ಬಾಸ್ ಕುಟುಂಬದ ನಾಲ್ಕು ಮಂದಿ ಕಾರಿನಲ್ಲಿ ತೆರಳಿದ್ದರು. ಭಾನುವಾರ ರಾತ್ರಿ ಉಮ್ರಾದಿಂದ ಮತ್ತೆ ವಾಸಸ್ಥಳ ಝುಬೈಲ್‍ಗೆ ಮರಳುತ್ತಿದ್ದಾಗ ತಡರಾತ್ರಿ 2.00 ಗಂಟೆ ಸುಮಾರಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ತಾಯಿ ಹಾಗೂ ಮಗ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಬ್ಬಾಸ್ ಅವರ ವಿವಾಹ ಆರು ತಿಂಗಳ ಹಿಂದೆಯಷ್ಟೇ ಮುಲ್ಕಿ ಕನ್ನಂಗಾರು ಮೂಲದ ಮೈನಾಝ್ ಜತೆಗೆ ನೆರವೇರಿತ್ತು. ಮೃತ ಅಬ್ಬಾಸ್ ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಸಚಿವ ಖಾದರ್ ಭೇಟಿ: ಮೃತರ ಮೊಂಟೆಪದವಿನ ಮನೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭ ನರಿಂಗಾನ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಸದಸ್ಯ ಮಹಮ್ಮದ್ ಫಯಾಝ್, ಜಿ.ಪಂ ಮಾಜಿ ಸದಸ್ಯ ಎನ್.ಎಸ್ ಕರೀಂ ಮೊದಲಾದವರು ಇದ್ದರು.

By suddi9

Leave a Reply

Your email address will not be published. Required fields are marked *