ಬಂಟ್ವಾಳ ತಾಲ್ಲೂಕಿನ ವಿವಿಧೆಡೆ ಈಚೆಗೆ ಬೀಸಿದ ಭಾರೀ ಗಾಳಿ ಮಳೆಗೆ ಮನೆ ಮತ್ತು ಬೆಳೆ ಹಾನಿಗೀಡಾದ ಸುಮಾರು 200ಕ್ಕೂ ಮಿಕ್ಕಿ ಮಂದಿ ಸಂತ್ರಸ್ತರಿಗೆ ರೂ 10ಲಕ್ಷ ಮೊತ್ತದ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಸಂಜೆ ವಿತರಿಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತಿತರರು ಇದ್ದರು.

