ಸುದ್ದಿ9 ಬಂಟ್ವಾಳ: : ಭಾರತೀಯ ಜನತಾ ಪಾಟರ್ಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದ 13 ದಿನಗಳ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ಯ 11ನೇ ದಿನದ ಪಾದಾಯಾತ್ರೆಗೆ ಸಿದ್ದಕಟ್ಟೆಯಲ್ಲಿ ಚಾಲನೆ ನೀಡಲಾಯಿತು. ವಂದೆ ಮಾತರಂ ಹಾಡಿನ ಬಳಿಕ ಆರಂಭಗೊಂಡ ಪಾದಾಯಾತ್ರೆ ರಾಯಿ, ಕೊಲ, ಅರಳ, ಪಂಜಿಕಲ್ಲು, ಮೂಡನಡುಗೋಡು ಗ್ರಾಮಗಳಲ್ಲಿ ಸಂಚರಿಸಲಿದೆ.
11ನೇ ದಿನದ ಪಾದಯಾತ್ರೆಯಲ್ಲಿ ಕಾರ್ಯಕ್ರಮದ ರುವಾರಿ ರಾಜೇಶ್ ನಾಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ, ಪ್ರಮುಖರಾದ ಪುರುಷ ಸಾಲ್ಯಾನ್ ನೆತ್ತರಕೆರೆ, ಪ್ರಥ್ವಿರಾಜ್, ರಝಾಕ್, ಗಣೇಶ್ ರೈ, ರಮಾನಾಥ ರಾಯಿ, ಎಸ್.ಶ್ರೀಧರ್, ಉಮೇಶ್ ಗೌಡ, ರತ್ನಕುಮಾರ್ ಚೌಟ, ಸತೀಶ್ ಪೂಜಾರಿ, ಮಾಧವ ಶೆಟ್ಟಿಗಾರ್, ಪ್ರವೀಣ ಹೆಗ್ಡೆ, ಸಂದೇಶ್ ಶೆಟ್ಟಿ, ಎಮ್.ಎನ್.ಹೆಗ್ಡೆ, ವಿನೋದ್ ಅಡಪ, ಉದಯ ಸಂಗಬೆಟ್ಟು ಮತ್ತಿತರರು ಹಾಜರಿದ್ದರು.

