ವಿಟ್ಲ: ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಟೋಟ ಸ್ಪರ್ಧೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವು ವಿಟ್ಲದ ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರತಿಭಾ ಶೆಟ್ಟಿ ಯವರು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಚಂದ್ರಹಾಸ ರೈ ಭಾಗವಹಿಸಿದ್ದರು. ಸೀತಾರಾಮ ಶೆಟ್ಟಿ ಕೊಲ್ಯ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಗ್ರಾಮ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಸ್ವಾಗತಿಸಿದರು. ಡಾ| ತಿಮ್ಮಪ್ಪ ರೈ ಕೆದಂಬಾಡಿ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಸಮುದಾಯದ ಪಟ್ಟಣ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
