ಬಂಟ್ವಾಳ: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದ.ಕ.ಜಿಲ್ಲೆ ಇದರ ಆಶ್ರಯದಲ್ಲಿ ರಾಜ್ಯ ಸರ್ಕಾರದ ವಿಶೇಷ ಯೋಜನೆಗಳ ಪ್ರಚಾರಾರ್ಥ ಹಮ್ಮಿಕೊಂಡ ಕಲಾಜಾಥಾದ ಬೀದಿ ನಾಟಕ ಕಾರ್ಯಕ್ರಮವು ಬುಧವಾರ ಬಿ.ಸಿ.ರೋಡು ಜಂಕ್ಷನ್ ನಲ್ಲಿ ನಡೆಯಿತು. ಕಲಾವಿದ ಗಿರೀಶ್ ನಾವಡ ಮತ್ತು ತಂಡದವರು ಬೀದಿನಾಟಕವನ್ನು ಪ್ರದರ್ಶಿಸಿದರು. ಈ ಜಾಥಾ ಆ.8 ರವರಗೆ ಜಿಲ್ಲೆಯ ವಿವಿಧೆಡೆ ಸಂಚರಿಸಲಿದೆ.

