ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನರಿಕೊಂಬು ನಾಗರಿಕ ಜಾಗೃತಿ ಸಮಿತಿ ವತಿಯಿಂದ ರೂ 1ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ‘ರಾಜೀವ ಗಾಂಧಿ ಬಸ್ತಂಗುದಾಣ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಮಾನಾಥ ರೈ ಭಾನುವಾರ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಮಾಜಿ ಸದಸ್ಯ ಮಾಧವ ಎಸ್.ಮಾವೆ, ಪುರಸಭಾ ಸದಸ್ಯ ಜಗದೀಶ ಕುಂದರ್, ಪ್ರಮುಖರಾದ ಬಿ.ರಘು ಸಪಲ್ಯ, ವಿಶ್ವಾಸ್ಕುಮಾರ್ ದಾಸ್, ವಾಣಿ ಪ್ರಕಾಶ ಕಾರಂತ್, ಆಲ್ಫೋನ್ಸ್ ಮಿನೇಜಸ್, ಪಿ.ಎಸ್.ಅಬ್ದುಲ್ ಹಮೀದ್, ಸಂಚಾರಿ ಠಾಣಾಧಿಕಾರಿ ಚಂದ್ರಶೇಖರಯ್ಯ ಮತ್ತಿತರರು ಇದ್ದರು.
